Advertisement

Tag: kendasampige

ಮಿಶ್ರಭಾವಗಳ ಮೂರ್ತರೂಪ ‘ಆಸ್ಟ್ರೇಲಿಯಾ ಡೇʼ : ವಿನತೆ ಶರ್ಮ ಅಂಕಣ

ಮೂಲನಿವಾಸಿ ಜನಸಮುದಾಯಗಳ ಬೆಂಬಿಡದ ಪ್ರಯತ್ನಗಳಿಂದ ಅವರ ಸಂಸ್ಕೃತಿಗಳು, ಭಾಷೆಗಳ ಬಗ್ಗೆ ಗೌರವ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಬೆಳೆಯುತ್ತಿರುವ ಬಹುಸಂಸ್ಕೃತಿಗಳ ಪ್ರಭಾವ, ವಲಸಿಗರ ಸಂಖ್ಯೆ ಜನರ ಮನೋಭಾವನೆಯನ್ನು ಬದಲಿಸುತ್ತಿದೆಯೇನೋ. ಇವರುಗಳ ಬಹುಸಂಸ್ಕೃತಿ ಆಚಾರ-ವಿಚಾರಗಳ, ಆಹಾರಪದ್ಧತಿಗಳ ವೈವಿಧ್ಯತೆಗಳಿಂದ, ಸಾಮ್ಯತೆಗಳಿಂದ ಪರಸ್ಪರರನ್ನು ಒಪ್ಪಿಕೊಳ್ಳುವ ಸಾಧ್ಯತೆಗಳು ವಿಸ್ತರಿಸುತ್ತಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಾಗರದ ಸದ್ದೂ, ಮೌನ ತೀರದ ಕಥೆಯೂ…: ರಾಮ್ ಪ್ರಕಾಶ್ ರೈ ಕೆ. ಸರಣಿ

ಇಲ್ಲಿನ ಐದು ಪಾತ್ರಗಳು ಪಂಚಭೂತಗಳ ಸಂಕೇತ. ಸಿಡಿಯುವ ರಿಚ್ಚಿ ಬೆಂಕಿಯಾದರೆ, ಮೌನ ಧ್ಯಾನಿ ಮುನ್ನಾ ಗಾಳಿ, ಅಲೆಮಾರಿಯಂತೆ ಸಾಗುವ ರಾಘು ನೀರು, ಸಹನಾಮೂರ್ತಿ ರತ್ನಕ್ಕ ಭೂಮಿ, ಬಾಲು ಆಗಸ. ಇದನ್ನು ಹೊರತುಪಡಿಸಿದರೆ, ಚಿತ್ರದ ಮಾತುಗಳು ಸೆರೆ ಆಗಿದ್ದು ಸಿಂಕ್ ಸೌಂಡ್ ತಂತ್ರಜ್ಞಾನದ ಮೂಲಕ. ಇದರಲ್ಲಿ, ದೃಶ್ಯದೊಂದಿಗೆ ಮಾತುಗಳ ದಾಖಲೀಕರಣ ಕೂಡ ನಡೆದು, ದೈನಂದಿನ ಬದುಕು ಕಣ್ಣ ಮುಂದೆ ಸಾಗುತ್ತಿರುವಂತೆ ಭಾಸವಾಗುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿ

Read More

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣ

Read More

ಬದುಕು ಇರುವುದು ಬದುಕಲು.. ಕಳೆದುಕೊಳ್ಳಲಲ್ಲ: ಸುಮಾವೀಣಾ ಸರಣಿ

ಹತ್ತನೆ ತರಗತಿಗೆ ಬಂದಾಗ ಇಬ್ಬರೂ ಒಂದೇ ಬೆಂಚಿನಲ್ಲಿ ಕುಳಿತುಕೊಳ್ಳುವ ಅವಕಾಶವಿತ್ತು. ಅದೂ ಬೋರ್ಡಿಂಗ್ ಶಾಲೆಯಲ್ಲಿ. ಇಬ್ಬರೆ ಕುಳಿತುಕೊಳ್ಳುವ ಬೆಂಚ್ ನಮಗೆ ಹೇಳಿ ಮಾಡಿಸಿದಂತಿತ್ತು.. ನಮಗೆ ಆಗೆಲ್ಲ ಇಂಕ್ ಪೆನ್ನಿನಲ್ಲೇ ನೋಟ್ಸ್ ಬರೆಸುತ್ತಿದ್ದರು. ಒಂದುವೇಳೆ ಇಂಕ್ ಖಾಲಿಯಾದರೆ ಒಬ್ಬರ ಪೆನ್ನಿನಿಂದ ಇನ್ನೊಬ್ಬರ ಪೆನ್ನಿಗೆ ಇಂಕ್ ಹಾಕಿಕೊಳ್ಳುತ್ತಿದ್ದೆವು. ಗೊರಟೆ ಹೂ, ದುಂಡುಮಲ್ಲಿಗೆ ಮುಡಿಯಲು ಪೈಪೋಟಿ ನಡೆಸುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ