Advertisement

Tag: kendasampige

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ

ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ