Advertisement

Tag: kendasampige

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಮೊದಲಿಗೆ, ಉಕ್ಕಿ ಹರಿಯುವ ಪ್ರೀತಿಯನ್ನು ನಿಯಂತ್ರಿಸಲು ನಾವು ಕಲಿಯಬೇಕು. ನೀನೀಗ ಪ್ರೀತಿಯ ಬಲಿಪಶುವಾಗಿರುವೆ ಎನ್ನುವ ಆತಂಕ ನನ್ನದು. ನನ್ನಿಂದ ದೂರವಿರಲು ನಿನ್ನಿಂದ ಸಾಧ್ಯವಿಲ್ಲ ಅನ್ನುವುದನ್ನು ನಾನು ಬಲ್ಲೆನು. ನನಗೂ ನೀನು ನನ್ನ ಹತ್ತಿರ ಇರಬೇಕೆಂಬ ಆಸೆಯಿದೆ. ಆದರೆ ನೀನು ನನಗೆ ಒಂದಿಷ್ಟು ಸಮಯಾವಕಾಶ ನೀಡಬೇಕೆಂದು ಕೋರುವೆ. ನಿನ್ನ ತಾಳ್ಮೆಯನ್ನು ನಾನು ಖಂಡಿತ ಪರೀಕ್ಷಿಸುವುದಿಲ್ಲ ಎನ್ನುವುದಂತೂ ಖಾತ್ರಿ.
ಡಾ. ಬಿ.ಆರ್. ಅಂಬೇಡ್ಕರ್‌ ತಮ್ಮ ಮದುವೆಗೂ ಮುನ್ನ ತಮ್ಮ ಪತ್ನಿಗೆ ಬರೆದಿದ್ದ ಪತ್ರವನ್ನು ಸದಾನಂದ ಆರ್. ಕನ್ನಡಕ್ಕೆ ಅನುವಾದಿಸಿದ್ದಾರೆ

Read More

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ