Advertisement

Tag: kendasampige

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ವಸ್ತುಗಳ ನಡುವೊಂದು ವಾಸ್ತವ: ಸೌರಭಾ ಕಾರಿಂಜೆ ಬರಹ

ಡಿಕ್ಲಟರಿಂಗ್ ನಮ್ಮ ದೇಹದ ಆರೋಗ್ಯಕ್ಕೂ ಒಳ್ಳೆಯದು. ಮನೆಯಲ್ಲಿ ಸೇರಿಕೊಂಡ ಅನೇಕ ವಸ್ತುಗಳು ಹಲವು ರೀತಿಯ ರೋಗಗಳಿಗೆ ಕಾರಣವಾಗುವ ಧೂಳಿಗೆ, ಅಸ್ತಮಾದಂತಹ ಖಾಯಿಲೆಗಳಿಗೆ ಕಾರಣವಾಗಬಹುದು. ಆಗಾಗ ಡಿಕ್ಲಟರಿಂಗ್ ಮಾಡುವುದರಿಂದ ಅದನ್ನು ತಡೆಯಬಹುದು. ಅಂತೂ ಈ ಡಿಕ್ಲಟರಿಂಗ್‌ನ ಹಿಂದೆ ಎಲ್ಲದಕ್ಕಿಂತ ಮುಖ್ಯವಾಗಿ ಯಾವುದು ಸಂತೋಷವನ್ನು ನೀಡುತ್ತದೆಯೋ ಅದನ್ನು ಮಾಡಿ ಮತ್ತು ಸಂತೋಷವನ್ನು ತರುವಂತಹ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಿ ಎನ್ನುವ ಸಂದೇಶವಿದೆ.
“ಡಿಕ್ಲಟರಿಂಗ್‌” ಕುರಿತು ಸೌರಭಾ ಕಾರಿಂಜೆ ಬರಹ ನಿಮ್ಮ ಓದಿಗೆ

Read More

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ