Advertisement

Tag: kendasampige

ಕೆ. ಸತ್ಯನಾರಾಯಣ ಬರೆಯುವ ಹೊಸ ಸರಣಿ “ಜೈಲು ಕತೆಗಳು” ಇಂದಿನಿಂದ

ನನಗೆ ಖೈದಿಗಳ ಬಗ್ಗೆ ತಿರಸ್ಕಾರವಾಗಲೀ, ಅವಮಾನವಾಗಲೀ, ಪೋಲೀಸರ ಬಗ್ಗೆ ಅನಗತ್ಯ ಭಯ-ಗೌರವಗಳಾಗಲೀ ಬೆಳೆಯಲಿಲ್ಲ. ಇವರೆಲ್ಲ ನಮ್ಮ ಕುಟುಂಬಗಳಿಂದ ಭಿನ್ನರಾದವರು ಎಂದೂ ಅನಿಸಲಿಲ್ಲ. ಆದರೆ ಕ್ರೀಡಾಪಟುಗಳು, ವಿಜ್ಞಾನಿಗಳು, ನಟರು, ಸಂಗೀತಗಾರರನ್ನು ಈ ಸಮಾಜ ರೂಪಿಸಿದೆ ಎಂಬುದು ಎಷ್ಟು ನಿಜವೋ, ಖೈದಿಗಳು, ಖೈದಿಗಳಾಗಬೇಕಾಗಿ ಬಂದವರು, ಅವರನ್ನು ಕೂಡ ಈ ಸಮಾಜವೇ ರೂಪಿಸಿದೆ ಎಂಬುದನ್ನೂ ಒಪ್ಪಬೇಕು.
ಖ್ಯಾತ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಸರಣಿ “ಜೈಲು ಕತೆಗಳು”

Read More

ಶಮನವಾಗಬೇಕಿದೆ ಶತಮಾನಗಳ ನೋವು: ವಿನತೆ ಶರ್ಮ ಅಂಕಣ

ಕಳೆದ ಶನಿವಾರ ಅಕ್ಟೋಬರ್ ೧೪ ರ ಸಂಜೆ ಸೋಲೆಂಬುದು ಬಹುಬೇಗ ಬಂತು. ಅದೇನೋ ಅವಸರವಿದೆ ಎನ್ನುವ ರೀತಿ ಧಾವಿಸಿ ಬಂದಂತೆ, ಇಗೋ ತಗೊಳ್ಳಿ ಎಂಬಂತೆ ಇಡೀ ದೇಶವನ್ನೇ ಆವರಿಸಿ ಮಂಕು ಹಿಡಿಸಿಬಿಟ್ಟಿತು. ಇದೇನಿದು ಮತ ಎಣಿಕೆ ಈಗಷ್ಟೇ ಆರಂಭವಾಯ್ತಲ್ಲ ಎನ್ನುವ ಮಾತು ಗಾಳಿಯಲ್ಲಿ ಇನ್ನೂ ತೇಲಾಡುತ್ತಿರುವಾಗಲೇ ‘ನೋ ವೋಟ್’ ಹೆಚ್ಚಾಗಿ, ನಾನು ಟಿವಿ ಮುಂದೆ ಹಾಗೆಯೇ ಸ್ಥಬ್ಧಳಾಗಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ