Advertisement

Tag: kendasampige

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

Read More

“ಮೀನು ಒಂದು ಪಿಟೀಲಾಗಿದ್ದಿದ್ದರೆ..”: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ರಾಕ್ಪೆಲ್ನಿಸ್‌ರ ಪ್ರಕಾರ, ರಾಷ್ಟ್ರದ ಆರ್ಥಿಕ ಪರಿಸ್ಥಿತಿ, ಬೂದು ಬಣ್ಣದ ಗುಬ್ಬಚ್ಚಿ, ‘ರೊಮ್ಯಾಂಟಿಸಿಸಂ-ನ ನೀಲಿ ಹೂವು,’ ನಮ್ಮ ನಮ್ಮ ಸ್ವಂತ ಅಸ್ಮಿತೆಗಳು – ಇಂತಹವುಗಳನ್ನು ಮರುಪಡೆಯಲು ಯತ್ನಿಸುವ ಮುನ್ನ ಭಾಷೆಯ ಕುದುರೆ ಲಾಯಗಳನ್ನು ಮೊದಲು ಸ್ವಚ್ಛಗೊಳಿಸಬೇಕು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಆದಿವಾಸಿಗಳ ಜಗತ್ತು: ಸತೀಶ್‌ ತಿಪಟೂರು ಬರಹ

ಇಲ್ಲಿ ನಮಗರಿವಿಲ್ಲದಂತೆ ರಂಗ ಕ್ರಿಯೆಯೊಂದು ಜರಗುತ್ತಿರುವುದನ್ನು ನಾನು ಗಮನಿಸಿದೆ. ಪ್ರತಿಯೊಂದು ತಂಡ ಅವರ ಕ್ರಿಯಾವಿಧಿ ಆಚರಣೆಗಳನ್ನು ತೋರುವಾಗ, ಕಥನಗಳನ್ನು ಹೇಳುವಾಗ, ನೃತ್ಯ ಪ್ರದರ್ಶಿಸುವಾಗ ಉಳಿದ ತಂಡದವರು ಪ್ರೇಕ್ಷಕರಾಗಿರುತ್ತಿದ್ದರು. ಇದನ್ನೆಲ್ಲ ಗಮನಿಸುತ್ತಿದ್ದ ನನಗೆ ಒಂದು ರೀತಿಯ ಕಳವಳ ಶುರುವಾಯಿತು. ಕಾಡಿನೊಳಗಿನ ಇವರ ಆಚರಣೆಯ, ಸಂಪ್ರದಾಯ, ಕ್ರಿಯಾವಿಧಿ, ನೃತ್ಯ ಸಂಭ್ರಮಗಳೆಲ್ಲವೂ ಹೊರಗೆ ನೋಡಲು ಕುತೂಹಲವೆನಿಸಿದರೂ ಶುಷ್ಕವೆನಿಸುತ್ತಿತ್ತು. ಸಂದರ್ಭಗಳಿಲ್ಲದೆ ವಾತಾವರಣವಿಲ್ಲದೆ ಭಾವನೆಗಳು ಅರಳುವುದಿಲ್ಲ. ಅನುಕರಿಸಿದರೂ ಅಣಕವೆಂಬಂತೆ ಕಾಣುತ್ತಿತ್ತು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಬಾಗಿಲಿಗೆ ಬಂದಿಹನು ಬಳೆಗಾರ: ಸ್ಮಿತಾ ರಾಘವೇಂದ್ರ ಬರಹ

ನನಗೂ ಒಳಗೊಳಗೇ ಗಾಭರಿ; ಮದುವೆಗೂ ಮುಂಚೆ ಡಜನ್ ಗಟ್ಟಲೆ ಬಳೆ ತುಂಬಿಕೊಂಡು ಒಂದೂ ಒಡೆಯದಂತೆ ಇಟ್ಟುಕೊಳ್ಳುತ್ತಿದ್ದೆನಲ್ಲ.. ಈಗ ಏನಾಯ್ತು. ಗಡಿಬಿಡಿಯಲ್ಲಿ ಕೆಲಸ ಮಾಡಿದ್ರೆ ಬಳೆ ಒಡದೆ ಹೋಗ್ತದೆ ನೋಡು ಅಂದ ಅಮ್ಮನ ಮಾತು ನೆನಪಾಗಿ ಸಮಾಧಾನವಾಗುತ್ತಿತ್ತಾದರೂ ಈ ಅಪಶಕುನ ಎನ್ನುವ ಭಯದಿಂದ ತಪ್ಪಿಸಿಕೊಳ್ಳಲು ಗಾಜಿನ ಬಳೆ ತೊಡುವುದನ್ನು ಕ್ರಮೇಣ ಬದಲಿಸಿದ್ದೆ.
ಬಳೆಗಾರ ಮತ್ತು ಬಳೆಗಳ ಕುರಿತು ಸ್ಮಿತಾ ರಾಘವೇಂದ್ರ ಕಲ್ಲೇಶ್ವರ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ