Advertisement

Tag: kendasampige

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ

ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ನೀ ನನಗಿದ್ದರೆ ನಾ ನಿನಗೆ: ಚಂದ್ರಮತಿ ಸೋಂದಾ ಸರಣಿ

ನಮ್ಮ ಬದುಕಿಗೆ ಹತ್ತಿರವಾದ ಹಕ್ಕಿಗಳಲ್ಲಿ ಕಾಗೆ, ಕೋಳಿಗಳೂ ಸೇರುತ್ತವೆ. ಕಾಗೆ ಬಣ್ಣ ಕಪ್ಪು ಅಂತ ಅದನ್ನು ಹಳಿಯುವುದಿದೆ. ಯಾರಾದರೂ ತಮ್ಮ ಮಕ್ಕಳನ್ನು ಹೊಗಳುತ್ತಿದ್ದರೆ ʻಕಾಗೆ ತನ್ನ ಮರಿ ಹೊನ್ನಮರಿ ಅಂದಿತ್ತಂತೆʼ ಎಂದು ಮೂಗುಮುರಿಯುವವರೂ ಇದ್ದಾರೆ. ಕೆಲವು ಬಾರಿ ಮಕ್ಕಳನ್ನು ನಂಬಿಸಲು ಕಾಗೆಯ ಬಳಕೆ ಇದೆ. ಮಗುವಿಗೆ ಕೊಡಬಾರದು ಎಂದಿರುವ ತಿನಿಸನ್ನು ಅದು ಬೇಕೇಬೇಕು ಎಂದು ಹಟಮಾಡಿದರೆ ʻಕಾಕಪಾಯಿ ಕಚ್ಗೊಂಡು ಹೋಯ್ತʼ ಅಂತ ಹೇಳುವುದಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ