Advertisement

Tag: kendasampige

ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆ’ ಇಂದಿನಿಂದ

‘ನಾನಿರೋದೇ ಹೀಗೇನೇ… ನಾನೇನೂ ಇದರಿಂದ ಕಲಿಯೋದಿಲ್ಲವೆಂದು ನಾವು ಅಹಮಿಕೆ ತೋರಿದೆವೋ, ಅಲ್ಲಿಗೆ ಮುಗೀತು ನಮ್ಮ ಬದುಕು! ಅದು ಕಬ್ಬಿಣದ ಕಡಲೆಯಂತಾಗುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪರೀಕ್ಷೆಯನ್ನು ಪಾಠ ಮಾಡಿ ಪರೀಕ್ಷೆ ಮಾಡ್ತಾರೆ! ಆದರೆ ಬದುಕು ಉಲ್ಟಾ. ಅದು ಪರೀಕ್ಷೆ ಮಾಡಿ ಪಾಠ ಕಲಿಸುತ್ತಾ ಹೋಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆʼ ಇಂದಿನಿಂದ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಕತೆ

ದಾಸಣ್ಣಚಾರ್ಯರ ಮುಖ ಪೇಲವವಾಯ್ತು. ‘ಛೆ!’ ಎಂದರು. ಆಮೇಲೆ ಮೆತ್ತಗೆ ‘ಇವಳಿಗೆ ಏನಾದರೂ ಈ ವಿಷಯ ತಿಳಿದರೆ, ಬೆಂಕಿ ಇಟ್ಟಾಳು ನನ್ನ ತಲೆಗೆ. ಆಕೆಗೆ ದನಕರು ಅಂದರೆ ದೇವರು. ಗಬ್ಬ ನಿಲ್ಲದಿದ್ದರೆ ಬೇಡ, ಹಟ್ಟಿಯಲ್ಲೇ ಇರಲಿ ಎಂದು ಆಕೆ ಅಮೇರಿಕೆಯಲ್ಲಿರುವಾಗಲೇ ಹೇಳಿದ್ದಳು. ಆದರೆ, ನನಗೆ ಗಬ್ಬ ನಿಲ್ಲದ ಮೇಲೆ ಸಾಕುವುದು ವ್ಯರ್ಥ ಎಂಬ ಭಾವನೆ ಬಂತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಡಾ. ನಾ. ಮೊಗಸಾಲೆ ಬರೆದ ಕತೆ “ನುಗ್ಗೆಗಿಡ”

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

Read More

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ