Advertisement

Tag: kendasampige

ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಸಮಯ ಸರಿಯಾಗಿತ್ತು ಹಾಗಾಗಲಿಲ್ಲ. ಒಂದು ವೇಳೆ ನಾನು ಶಸ್ತ್ರಪ್ರಹಾರಕ್ಕೆ ಅಣಿಯಾದೆನೆಂದಿಟ್ಟುಕೊಳ್ಳಿ. ಅದುವರೆಗೂ ಕದಲದೇ ನಿಂತಿದ್ದ ನನ್ನ ಅನಿರೀಕ್ಷಿತ ದೇಹಚಲನೆ ಕಂಡು ಹುಲಿಗೆ ವಿಚಲಿತವಾದಂತೆನ್ನಿಸಿ ಅದು ಅಕ್ಷರಶಃ ಕೆರಳುತ್ತಿತ್ತು. ನಾನು ಗನ್ನು ಮೇಲಕ್ಕೆತ್ತಿ ಹೊಡೆಯಬೇಕೆಂದು ಹಂಚಿಕೆ ಹಾಕುವಾಗಲೇ ಅದು ಠಣ್ ಎಂದು ಒಂದೇ ನೆಗೆತಕ್ಕೆ ನಮ್ಮ ಮೇಲೆರಗಿ ಸಿಕ್ಕವರ ಕತ್ತು ಹಿಸುಕಿ ಕರುಳು ಬಗೆದಿರುತ್ತಿತ್ತು. ಕ್ಷಣಮಾತ್ರದಲ್ಲೇ ಈ ಅಚಾತುರ್ಯ ಸಂಭವಿಸುವ ಸಾಧ್ಯತೆಯಿತ್ತು. ನಾನು ಗನ್ನು ಚಲಾಯಿಸುವ ಗೋಜಿಗೆ ಹೋಗದಿದ್ದುದೆ ಸರಿಯಾಯ್ತು.
ಶ್ರೀಧರ ಪತ್ತಾರ ಅನುಭವ ಕಥನ “ಕಾಟಿಹಳ್ಳದ ತಿರುವು” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

Read More

ಕೆ. ಸತ್ಯನಾರಾಯಣ ಬರೆಯುವ ಹೊಸ ಸರಣಿ “ಜೈಲು ಕತೆಗಳು” ಇಂದಿನಿಂದ

ನನಗೆ ಖೈದಿಗಳ ಬಗ್ಗೆ ತಿರಸ್ಕಾರವಾಗಲೀ, ಅವಮಾನವಾಗಲೀ, ಪೋಲೀಸರ ಬಗ್ಗೆ ಅನಗತ್ಯ ಭಯ-ಗೌರವಗಳಾಗಲೀ ಬೆಳೆಯಲಿಲ್ಲ. ಇವರೆಲ್ಲ ನಮ್ಮ ಕುಟುಂಬಗಳಿಂದ ಭಿನ್ನರಾದವರು ಎಂದೂ ಅನಿಸಲಿಲ್ಲ. ಆದರೆ ಕ್ರೀಡಾಪಟುಗಳು, ವಿಜ್ಞಾನಿಗಳು, ನಟರು, ಸಂಗೀತಗಾರರನ್ನು ಈ ಸಮಾಜ ರೂಪಿಸಿದೆ ಎಂಬುದು ಎಷ್ಟು ನಿಜವೋ, ಖೈದಿಗಳು, ಖೈದಿಗಳಾಗಬೇಕಾಗಿ ಬಂದವರು, ಅವರನ್ನು ಕೂಡ ಈ ಸಮಾಜವೇ ರೂಪಿಸಿದೆ ಎಂಬುದನ್ನೂ ಒಪ್ಪಬೇಕು.
ಖ್ಯಾತ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಸರಣಿ “ಜೈಲು ಕತೆಗಳು”

Read More

ಶಮನವಾಗಬೇಕಿದೆ ಶತಮಾನಗಳ ನೋವು: ವಿನತೆ ಶರ್ಮ ಅಂಕಣ

ಕಳೆದ ಶನಿವಾರ ಅಕ್ಟೋಬರ್ ೧೪ ರ ಸಂಜೆ ಸೋಲೆಂಬುದು ಬಹುಬೇಗ ಬಂತು. ಅದೇನೋ ಅವಸರವಿದೆ ಎನ್ನುವ ರೀತಿ ಧಾವಿಸಿ ಬಂದಂತೆ, ಇಗೋ ತಗೊಳ್ಳಿ ಎಂಬಂತೆ ಇಡೀ ದೇಶವನ್ನೇ ಆವರಿಸಿ ಮಂಕು ಹಿಡಿಸಿಬಿಟ್ಟಿತು. ಇದೇನಿದು ಮತ ಎಣಿಕೆ ಈಗಷ್ಟೇ ಆರಂಭವಾಯ್ತಲ್ಲ ಎನ್ನುವ ಮಾತು ಗಾಳಿಯಲ್ಲಿ ಇನ್ನೂ ತೇಲಾಡುತ್ತಿರುವಾಗಲೇ ‘ನೋ ವೋಟ್’ ಹೆಚ್ಚಾಗಿ, ನಾನು ಟಿವಿ ಮುಂದೆ ಹಾಗೆಯೇ ಸ್ಥಬ್ಧಳಾಗಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ