Advertisement

Tag: kendasampige

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ನಿಯಂತ್ರಿಸುವ ಬುದ್ಧಿಯನ್ನು ನಿಯಂತ್ರಿಸೋಣವೇ?: ಮಾಲತಿ ಶಶಿಧರ್‌ ಅಂಕಣ

ಈಗ ಹೆಜ್ಜೆ ಹೆಜ್ಜೆಗೂ ನಿಯಂತ್ರಣ ಹೇರುತ್ತಿದ್ದ ಗಂಡನಿಲ್ಲ. ಹೆಂಡತಿಗೆ ಕಟ್ಟು ಪಾಡು ಹೇರುವವರಿಲ್ಲ, ಆಕೆ ಮಗಳ ಜೊತೆ ಶಾಶ್ವತವಾಗಿ ತನ್ನ ತವರು ಸೇರಿದ್ದಾರೆ. ಈಗ ಹೀಗೆ ಇರು ಹಾಗೆ ಇರು ಎಂದು ಹೇಳುವವರಿಲ್ಲ. ಆಕೆ ಹೇಗೆ ಬೇಕಾದರೂ ಇರಬಹುದು. ಗಂಡನಿಲ್ಲದ ನೋವಿದೆ ಆದರೀಗ ಉಸಿರುಗಟ್ಟುತ್ತಿಲ್ಲ. ಇಷ್ಟಕ್ಕೇಕೆ ಆತ ಅಷ್ಟೆಲ್ಲಾ ಹೆಂಡತಿಯನ್ನ ಹಿಡಿತದಲ್ಲಿಟ್ಟುಕೊಳ್ಳಬೇಕಿತ್ತು. ಆತನಿಗೆ ಒಂದು ದಿನ ಎಲ್ಲವನ್ನೂ ಎಲ್ಲರನ್ನೂ ಬಿಟ್ಟು ಇದ್ದಕ್ಕಿದ್ದ ಹಾಗೆ ಅನಾಥನಾಗಿ ಹೊರಟು ಬಿಡಬೇಕು ಎಂಬ ಅರಿವಿದ್ದರೆ ನಿಜಕ್ಕೂ ಆತ ಹಾಗೆಲ್ಲ ಮಾಡುತ್ತಿದ್ದರ?
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

Read More

ಮನೆ ಮತ್ತು ಮನದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಇಲ್ಲಿ ಕನ್ನಡಕ್ಕೆ ಅನುವಾದಿಸಿರುವ ದಿತಿ ರೋನೆನ್‌ರ ಕವನಗಳಲ್ಲಿ ಅವರ ಎಲ್ಲಾ ಆಸ್ಥೆಗಳ, ನಂಬಿಕೆಗಳ, ಕಾಳಜಿಗಳ ಉದಾಹರಣೆಗಳನ್ನು ಕಾಣಬಹುದು. ಹಿಟ್ಲರ್‌ನ ಕಾಲದ ಜರ್ಮನಿ ಯಹೂದಿಗಳ ವಿರುದ್ಧ ನಡೆಸಿದ ಹತ್ಯಾಕಾಂಡದ ನೆನಪುಗಳು ಗಾಯಗಳು ಎಂದೂ ಮರೆಯಾಗಲ್ಲ. ಈ ಹತ್ಯಾಕಾಂಡದಿಂದ ಬದುಕುಳಿದವರ ಮಗಳಾಗಿ ದಿತಿ ರೋನೆನ್‌ ಅವರು ಇದರ ಬಗ್ಗೆ ಬಹು ಮಾರ್ಮಿಕವಾಗಿ ಬರೆಯುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ