Advertisement

Tag: kendasampige

ಹೊಷಾಯ್ ಹೊಸೆದ ಹೊಸ ಕತೆ….: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ನಿಧಾನಕ್ಕೆ ನಾಲ್ಕಾರು ಬಾರಿ ಹತ್ತಿ ಇಳಿಯುತ್ತಾ ನನ್ನ ಕಾಲಿಗೆ ಬಲ ಬರಲು ಪ್ರಾರಂಭವಾಯಿತು! ನಿಧಾನವಾಗಿ ನನ್ನ ಕಾಲಿನ ಶಕ್ತಿ ಮರಳಿತು. ಮೊದಲಿನಂತಾದೆ. ಕೂಡಿಕೊಂಡ ನರಗಳೆರಡು ನೈಸರ್ಗಿಕ ವಿಧಾನದಲ್ಲೇ ಬೇರ್ಪಟ್ಟವು! ವಾವ್‌ ಅದ್ಭುತ! ಬದುಕಿನ ಆಸೆ ಕಳಕೊಂಡ ನಾನು ಮತ್ತೆ ಬದುಕ ಜೀವಿಸತೊಡಗಿದೆ. ತಾನು ಹೊಷಾಯ್ ಆದರೂ ಬಾಹುಬಲಿಯ ಸೇವೆಗೆ ನಿಂತೆ! ಬೆಳಿಗ್ಗೆ ಬೇಗ ಬಂದು ಬಾಗಿಲು ತೆಗೆಯುವುದು. ದೇವಾಲಯದ ವಠಾರದ ಸ್ವಚ್ಛತೆ. ಬಂದವರಿಗೆ ಮಾಹಿತಿ ನೀಡುವುದು. ಪೂಜೆಗೆ ಬರುವ ಪುರೋಹಿತರಿಗೆ ಸಹಾಯ ಮಾಡುತ್ತಾ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ನೀನು ಬೆಳೆದರೆ ನಾನು ಬೆಳೆವೆನು: ಚಿತ್ರಾ ವೆಂಕಟರಾಜು ಸರಣಿ

ಎಷ್ಟು ಸಲ ಪ್ರವೇಶ ಕೊಡಬಾರದ ಸೀನ್‌ಗಳಲ್ಲಿ ತಪ್ಪಿ ಪ್ರವೇಶ ಕೊಟ್ಟಿರುತ್ತೇವೆ, ಆಡಲೇಬೇಕಾದ ಮಾತನ್ನು ಆಡದೇ ಉಳಿದಿದ್ದೇವೆ. ಆಡಬಾರದಿದ್ದ ಸಂಭಾಷಣೆಗಳನ್ನು ಸುಲಭವಾಗಿ ಆಡಿಬಿಟ್ಟಿರುತ್ತೇವೆ. ಏನೇ ಮಾಡಲಿ ಒಮ್ಮೆ ಆ ನಾಟಕ ಮುಗಿದ ಮೇಲೆ ಮುಗಿಯಿತು… ಒಮ್ಮೆ ಪ್ರದರ್ಶನ ಮುಗಿದ ಮೇಲೆ ಮತ್ತೆ ಆ ದೃಶ್ಯದಲ್ಲಿ ನಮ್ಮ ಎಂಟ್ರಿ ಇಲ್ಲ. ಮತ್ತೆ ಬೇರೆಯದೇ ನಾಟಕದಲ್ಲಿ ಬೇರೆಯದೇ ಪಾತ್ರ! ನಾಟಕದ ಮಜಾ ಎಂದರೆ ಬದುಕಿಗಿಲ್ಲದ ಮರು ಪ್ರದರ್ಶನದ ಅವಕಾಶ ನಾಟಕದಲ್ಲಿದೆ. ಎಲ್ಲ ನಟರೂ ಒಪ್ಪಿದರೆ ಮತ್ತೆ ಅದೇ ನಾಟಕವನ್ನು ಆಡಬಹುದು. ಬೇಕಿದ್ದರೆ ಬೇರೆ ರೀತಿಯಲ್ಲಿ. ಆದರೆ, ಪ್ರತಿ ಬಾರಿಯೂ ಹೊಸದಾಗಿ ಅಭಿನಯಿಸಬೇಕು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ವೈ ಬಿ ಹಾಲಬಾವಿ ಬರೆದ ಎರಡು ಗಜಲ್‌ಗಳು

“ಹಸಿರೇ ಇಲ್ಲದೇ ಉಸಿರಾಡುತ್ತಿವೆ ಊರು, ಶಹರ ಮೈಯೆಲ್ಲಾ ವಿಷವಾಗಿ
ಅಶುದ್ಧ ಗಾಳಿ, ಅಸ್ವಸ್ಥ ಬೆಳಕನ್ನುಂಡು ನರಳುತ್ತಿವೆ ನಗರಗಳು ನರಕವಾಗಿ

ಪ್ರೀತಿ, ನೀತಿ, ಸ್ನೇಹ ಇರದೇ ಹಳಸಿವೆ ಸಂಬಂಧಗಳು ಕಾಲ ಕಸವಾಗಿ
ಯಾಂತ್ರಿಕ ನಗರ ಜೀವನ, ಉರುಳುತ್ತಿವೆ ದಿನಗಳು ಮೈಯೆಲ್ಲಾ ಸಾವಾಗಿ”- ವೈ ಬಿ ಹಾಲಬಾವಿ ಬರೆದ ಎರಡು ಗಜಲ್‌ಗಳು

Read More

ಅಭಿಮಾನಿಗಳ ಆಯರಿಯೂ, ಅಮ್ಮ ಹಾಕುತ್ತಿದ್ದ ಬರೆಗಳೂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಂದೊಂದು ಪ್ರಯೋಗದಲ್ಲೂ ಲೋಹಿತಾಶ್ವನ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೆಚ್ಚುಮಾಡಿಕೊಳ್ಳುತ್ತಿದ್ದೆ. ಜನರೆಲ್ಲ ಮನೆಗೆ ಬರಲು ಶುರುವಿಟ್ಟರು. ಭಾಗಮ್ಮನವರು ಇಂತಹದಕ್ಕೆಲ್ಲ ಸೊಪ್ಪೇ ಹಾಕುತ್ತಿರಲಿಲ್ಲ. ಎಂಟು ವರ್ಷ ಮೀರಿದಂತೆ ದೇಹ ಬದಲಾವಣೆಯಾಗುತ್ತಿತ್ತು. ನನ್ನ ಮುಖ, ಗಲ್ಲ, ಎದೆ, ಕೈ ತೋಳುಗಳು, ಇಡೀ ದೇಹವೇ ಅಗಲಿಸುತ್ತಿದ್ದ ವಯಸ್ಸು. ಅದಕ್ಕಾಗೋ ಅಥವಾ ಅಸೂಯೆಯಿಂದಲೋ ನಾನ್ಯಾರ ಬಳಿಯಾದರೂ ಮಾತಿಗೆಂದು ನಿಂತರೂ ಬೈದು, ಹೊಡೆದು ರಾದ್ಧಾಂತ ಮಾಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎಂಟನೆಯ ಕಂತು

Read More

ಪುಸ್ತಕ ಲೋಕಾರ್ಪಣೆ ಮತ್ತು ಮಾರಾಟ: ಎಚ್. ಗೋಪಾಲಕೃಷ್ಣ ಸರಣಿ

ಯಾರೋ ನನ್ನನ್ನು ಗಮನಿಸುತ್ತಾ ಇದ್ದಾರೆ ಎಂದೂ ಅನಿಸಬೇಕೇ..? ನರಸಿಂಹಯ್ಯನವರ ಕಾದಂಬರಿ ಓದಿ ಬೆಳೆದವರಿಗೆ ಈ ಸನ್ನಿವೇಶ ಒಟ್ಟಿಗೇ ಎಂಟೋ ಹತ್ತೋ ಭಯಾನಕ ಭೂತಗಳು, ನಡು ಹಗಲಿನಲ್ಲಿ ಮೋಹಿನಿಯ ಕಾಟ, ಮಟಮಟ ಮಧ್ಯಾಹ್ನ ಕಾಡಿತ್ತು ಕರಿ ಮೋಹಿನಿ… ಮೊದಲಾದ ಆಕರ್ಷಕ ಶೀರ್ಷಿಕೆಗಳು ಇರುವ ಹಲವಾರು ಪತ್ತೇದಾರಿ ಕಾದಂಬರಿಗಳನ್ನು ಬರೆಯಲು ಮತ್ತು ಬರಹದಲ್ಲಿ ತಾನೇ ಸೆಂಟರ್ ಫಿಗರ್ ಆಗಿ ಮಿಂಚುವ ಅವಕಾಶಗಳೂ ಸಹ ಹೇರಳವಾಗಿದ್ದವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೭ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ