Advertisement

Tag: kendasampige

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಲೋಕದ ಚಿಂತಿ ಯಾಕ ಮಾಡತಿ..?: ಎಸ್ ನಾಗಶ್ರೀ ಅಜಯ್ ಅಂಕಣ

ಹತ್ತು ಜನರ ನಡುವಿದ್ದೂ ಅವರಿವರಂತಾಗದೆ, ತಮ್ಮ ಮಿತಿಯಲ್ಲಿ ಆಗುವ ಸಕಲವನ್ನೂ ಸಂತೋಷ, ಸಮಾಧಾನದಿಂದ ಮಾಡುತ್ತಾ, ಮೆಚ್ಚುಗೆಗೂ ಹಾತೊರೆಯದೆ, ಯಾರನ್ನೂ ದೂರದೆ ಸಂತರಂತೆ ಬದುಕಿದವರಿದ್ದಾರೆ. ಮನೆಮನೆಗಳಲ್ಲಿ ಅಂತಹವರನ್ನು ಕಂಡಿರುತ್ತೇವೆ. ಸದಾ ಗಿಜಿಗುಡುವ ಮನೆ, ಬಂದು ಹೋಗುವವರು, ಓದಲೆಂದು, ಕೆಲಸಕ್ಕೆಂದು ಬಂದು ಉಳಿದ ಬಂಧುಗಳ ಮಕ್ಕಳು, ದೇವಸ್ಥಾನದ ಪ್ರಸಾದ, ಚರಪು ಮಾಡುವ ಜವಾಬ್ದಾರಿ, ರೋಗಿಗಳ ಆರೈಕೆ, ಹಿರಿಯರ ಕಾಳಜಿ, ದಿನಂಪ್ರತಿ ಹದಿನೈದು ಇಪ್ಪತ್ತು ಜನರಿಗೆ ಕಡಿಮೆಯಿಲ್ಲದಂತೆ ಊಟೋಪಚಾರ…
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಹಣಕ್ಕಾಗಿ ಕಡಿದುಹೋದ ಅನುಬಂಧ: ಮಾರುತಿ ಗೋಪಿಕುಂಟೆ ಸರಣಿ

ಮಾವನ ಎಲ್ಲಾ ಕೆಲಸಗಳಲ್ಲಿಯೂ ಅಪ್ಪ ಮುಂದಿರುತ್ತಿದ್ದ. ಕೊನೆಗೊಂದು ದಿನ ಮದುವೆಯ ಹೆಣ್ಣು ಗೊತ್ತಾಗಿ ಮದುವೆಯೂ ನಡೆದು ಹೋಯಿತು. ಮದುವೆಯಲ್ಲಿಯಂತೂ ಅಪ್ಪ ನಿರಂತರವಾಗಿ ಓಡಾಡಿದ್ದ. ತನ್ನ ಕೆಲಸಗಳನ್ನೆಲ್ಲ ಬದಿಗೊತ್ತಿ ಮುಂದೆ ನಿಂತು ಮದುವೆ ಮಾಡಿದ್ದ. ನಾವಿನ್ನೂ ಚಿಕ್ಕ ಹುಡುಗರಾದ್ದರಿಂದ ಮದುವೆಯಲ್ಲಿ ನಮ್ಮನ್ನು ಜೊತೆಗಿರಿಸಿಕೊಂಡೆ ಫೋಟೊ ತೆಗಿಸಿಕೊಂಡಿದ್ದ ನಮ್ಮಾವನಿಗೆ ನಮ್ಮ ಮೇಲೆ ಬಹಳ ಅಕ್ಕರೆ ಇದೆ ಎಂದುಕೊಂಡೆವು. ದೊಡ್ಡವರಾದ ಮೇಲೆಯೆ ನಮಗೂ ತಿಳಿದದ್ದು, ನಡತೆಗು ಮನಸ್ಸಿನ ಭಾವನೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆಯೆಂದು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ