Advertisement

Tag: kendasampige

ವಿಶ್ವ ಕಪ್ 2023ರ ಮಾಹಿತಿಗಳು: ಇ.ಆರ್.‌ ರಾಮಚಂದ್ರನ್‌ ಅಂಕಣ

ಭಾರತ ಮತ್ತು ಶ್ರೀಲಂಕದ ಮ್ಯಾಚ್ ಕಡಿಮೆ ಸ್ಕೋರ್‌ಗಳಾಗಿದ್ಯೂ ಆಟ ಬಹಳ ರೋಮಾಂಚನವಾಗಿತ್ತು. ಭಾರತ ಎಂದಿನಂತೆ ಚೆನ್ನಾಗಿ ಶುರುಮಾಡಿ ಇದ್ದಕ್ಕಿದಂತೆ ತನ್ನ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. 20 ವರ್ಷದ ದ್ಯೂನಿತ್ ವೆಲ್ಲಲಾಗೆ ತನ್ನ ಎಡಗೈ ಸ್ಪಿನ್ ಬೋಲಿಂಗ್‌ನಿಂದ ಕೇವಲ ಮೂರು ಓವರ್‌ನಲ್ಲಿ ಮೂರು ವಿಕೆಟ್ ಕಬಳಿಸಿದನು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ನೀ ನನಗಿದ್ದರೆ ನಾ ನಿನಗೆ: ಚಂದ್ರಮತಿ ಸೋಂದಾ ಸರಣಿ

ನಮ್ಮ ಬದುಕಿಗೆ ಹತ್ತಿರವಾದ ಹಕ್ಕಿಗಳಲ್ಲಿ ಕಾಗೆ, ಕೋಳಿಗಳೂ ಸೇರುತ್ತವೆ. ಕಾಗೆ ಬಣ್ಣ ಕಪ್ಪು ಅಂತ ಅದನ್ನು ಹಳಿಯುವುದಿದೆ. ಯಾರಾದರೂ ತಮ್ಮ ಮಕ್ಕಳನ್ನು ಹೊಗಳುತ್ತಿದ್ದರೆ ʻಕಾಗೆ ತನ್ನ ಮರಿ ಹೊನ್ನಮರಿ ಅಂದಿತ್ತಂತೆʼ ಎಂದು ಮೂಗುಮುರಿಯುವವರೂ ಇದ್ದಾರೆ. ಕೆಲವು ಬಾರಿ ಮಕ್ಕಳನ್ನು ನಂಬಿಸಲು ಕಾಗೆಯ ಬಳಕೆ ಇದೆ. ಮಗುವಿಗೆ ಕೊಡಬಾರದು ಎಂದಿರುವ ತಿನಿಸನ್ನು ಅದು ಬೇಕೇಬೇಕು ಎಂದು ಹಟಮಾಡಿದರೆ ʻಕಾಕಪಾಯಿ ಕಚ್ಗೊಂಡು ಹೋಯ್ತʼ ಅಂತ ಹೇಳುವುದಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಅಂಗಿ, ಮತ್ತದರ ಪ್ರಸಂಗಗಳು…: ಮಾರುತಿ ಗೋಪಿಕುಂಟೆ ಸರಣಿ

ಊರಿನ ಹುಡುಗರೆಲ್ಲ ನೋಡಿ ಹೇಗೆ ಹರಳೆಣ್ಣೆ ಹಚ್ಕೊಂಡು ಓಡಾಡ್ತ ಇದ್ದಾರೆ. ನಿಮಗೆ ಹಬ್ಬ ಬ್ಯಾಡ್ವ ಎಂದು ಅಜ್ಜಿ ಗದರಿದ್ದಳು. ನಾವೇನು ಹೊಸಬಟ್ಟೆ ಹಾಕ್ಕೋಳಲ್ಲ. ನಾವ್ಯಾಕೆ ಹರಳೆಣ್ಣೆ ಹಚ್ಕೊಬೇಕು ಎಂದು ಸುಮ್ಮನಾದೆವು. ಅಪ್ಪ ಬಂದು ಗದರಿದ. ನಾವು ವಿಧಿಯಿಲ್ಲದೆ ಅದಕ್ಕೆ ಸಿದ್ಧರಾದೆವು. ಎಣ್ಣೆಸ್ನಾನ ಆದಮೇಲೆ ಇದ್ದಕ್ಕಿದ್ದಂತೆ ಹೊಸ ಬಟ್ಟೆ ಕಾಣಿಸಿದವು. ಅವು ರೆಡಿಮೇಡ್ ಬಟ್ಟೆಗಳಾಗಿದ್ದವು. ಬುಟ್ಟಿ ತೋಳಿನ ರಬ್ಬರ್‌ನ ಎಳೆಯ ಅಲ್ಲಲ್ಲಿ ಮಿಂಚು ಕಾಣಿಸುವ ಇಂಗ್ಲೀಷ್ ಅಕ್ಷರದ ಉಲ್ಟಾ ಸೀದಾ ಅಡ್ಡ ಹೀಗೆ ನಾನಾ ರೀತಿ ಕಾಣುವ ಪ್ರಿಂಟೆಡ್ ಅಕ್ಷರಗಳ ಆ ‘ಅಂಗಿ’ ಆಧುನಿಕತೆಯ ‘ಟೀ ಶರ್ಟ್’ ಆಗಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನಾರನೆಯ ಕಂತು

Read More

ಯಾವುದೀ “ಮುಳ್ಳು, ನಾಲಿಗೆ…?”: ವಸಂತಕುಮಾರ್‌ ಕಲ್ಯಾಣಿ ಬರಹ

ಹಾಗಾಗಿ ಕೆಲವು ಗಂಡು ಮಕ್ಕಳು ಹೆಣ್ಣು ಮಕ್ಕಳು ಕೂತ ಭಾಗದಲ್ಲಿನ ಕೊನೆಯ ಬೆಂಚ್‌ಗಳಲ್ಲಿ ಕೂರಬೇಕಿತ್ತು. ಅವರ ಪೆನ್ನಿನಲ್ಲಿ ಇಂಕ್ ಖಾಲಿಯಾದಾಗ, ಒಬ್ಬಳು ಇನ್ನೊಬ್ಬಳಿಂದ ಸಾಲ ಪಡೆಯುತ್ತಿದ್ದಳು. ಅದು ಹೇಗೆಂದರೆ, ಪೆನ್ನಿನ ಮೇಲ್ ಭಾಗದ ತಿರುಪು ತಿರುಗಿಸಿಕೊಂಡು, ಕೆಳಮುಖವಾಗಿ ಇಟ್ಟುಕೊಂಡು ಪುನಃ ತಿರುಪು ಟೈಟ್ ಮಾಡುವಾಗ ಒಂದೊಂದೇ ತೊಟ್ಟು ಇಂಕ್ ಕೆಳಗೆ ಬೀಳುತ್ತಿತ್ತು, ಅದನ್ನು ಇಂಕ್ ಬೇಕಾದವರು ತಮ್ಮ ಪೆನ್ನನ್ನು ಸಿದ್ಧವಾಗಿಟ್ಟುಕೊಂಡು ನಾಜೂಕಾಗಿ ಒಳಗೆ ಬೀಳುವಹಾಗೆ ಮಾಡಿಕೊಂಡು, ಎಷ್ಟು ತೊಟ್ಟು ಬಿತ್ತು ಗಮನಿಸಿ, ಪುನಃ ಸಾಲ ವಾಪಸ್ ಮಾಡಬೇಕು.
ವಸಂತಕುಮಾರ್‌ ಕಲ್ಯಾಣಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ