Advertisement

Tag: kendasampige

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕಳೆದುಹೋದವರನ್ನು ಹೇಗೆ ಹುಡುಕಲಿ?: ಅಮಿತಾ ರವಿಕಿರಣ್ ಬರಹ

ಇದನ್ನೆಲ್ಲಾ ನಾನೀಗ ಬರೆಯುವಾಗಲೂ ಇದೆಲ್ಲ ಕನಸೇ ಅನಿಸುತ್ತದೆ, ಕಂಡು ಕೇಳರಿಯದ ಊರಿನಿಂದ ಬಂದು, ನನ್ನೂರಿನಿಂದ ಹೋಗುವಾಗ ಅಣ್ಣಂದಿರಾಗಿ ಹೋಗಿದ್ದರು. ಹೋಳಿಗೆ ಬಣ್ಣ ಕಳಿಸುತ್ತಿದ್ದೆ, ದಶರೆಗೆ ಬನ್ನಿ, ರಕ್ಷಾಬಂಧನಕ್ಕೆ ರಾಖಿ, ಸಂಕ್ರಾಂತಿಗೆ ಎಳ್ಳು, ಪತ್ರಗಳಲ್ಲಿ ಒಣಗಿದ ಹೂವು ಎಲೆಗಳು. ಅದೊಂದು ಬೇರೆಯದೇ ಲೋಕವಾಗಿತ್ತು. ಮೂವರಲ್ಲಿ ಜಾಸ್ತಿ ಪತ್ರ ಬರೆಯುತ್ತಿದ್ದುದು ದೆಹಲಿಯ ಅಶೋಕ್ ಕುಮಾರ್ ಮತ್ತು ಅಕ್ಬರ್ ಖಾನ್ ಅವರು. ಜೀತೇಂದ್ರ ಪ್ರಸಾದ್ ಅವರ ಪತ್ರ ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಬರುತ್ತಿತ್ತು. ನಾನು, ತಂಗಿ ಪತ್ರ ಬರೆಯುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ