Advertisement

Tag: kendasampige

ಚಿಗರಿ ಬಸ್ಸಿನ ಗಂಧರ್ವ: ಲಿಂಗರಾಜ ಸೊಟ್ಟಪನವರ್‌ ಪ್ರಬಂಧ

ನಾನು ಸರ್‌ಗೆ ಐದುನೂರು ಕೊಟ್ಟೆ.. ಅವರು ಮಡಚಿ ಇಟ್ಟುಕೊಂಡರು. ಆಯ್ತು ಎಂದರು.. ನಾನು ನಿಂತೇ ಇದ್ದೆ. ಯಾಕೋ ಅಂದರು.. ನಾನು ಮತ್ತೆ ಐದು ನೋಟು ಕೊಟ್ಟೆ. ಅವರು ಹೈರಾಣ. ಪ್ರಯೋಗ ಮಾಡಿದ್ದು ಅರ್ಥವಾಯಿತು. ಅವರು ಏನೊಂದು ಹೇಳದೆ ಮೌನವಾದರು. ಹೋಗಿ ಕುತ್ಕೋ ಅಂದರು ಡೆಸ್ಕ್‌ನಲಿ ಕೂತೆ. ಸ್ವಲ್ಪ ಹೊತ್ತು ಹಾಗೇ ನೋಡಿದರು. ಹೀಗೆಲ್ಲ ಮಾಡಬಾರದು.. ಎಂದರು ಅಷ್ಟೇ. ನಾನು ಹಾಗೆಲ್ಲ ಮಾಡಿಯೂ ಐದು ನೋಟುಗಳನ್ನು ಅವರಿಗೆ ಕೊಟ್ಟಿದ್ದೆ. ಅವರು ತಪ್ಪನ್ನು ಮಾತ್ರ ತಿದ್ದುವ ಪ್ರಯತ್ನ ಮಾಡಿದ್ದರು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ