Advertisement

Tag: kendasampige

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ಇಷ್ಟಕ್ಕೆಲ್ಲ ಕಾರಣವಾದ ಕಪ್ಪು ಬಿಳುಪಿನ ಪಾಸ್ಪೋರ್ಟ್ ಸೈಜ್ ಫೋಟೊ ಸರ್ಕಾರವು ಉಚಿತವಾಗಿ ಕೊಟ್ಟ ಅಂಗಿಯಲ್ಲಿ ಕಪ್ಪು ಮಿಶ್ರಿತ ನೀಲಿಯ ನನ್ನ ಪಟ ಚಂದವಾಗಿ ಕಾಣುತ್ತಿತ್ತು. ಅದನ್ನೆ ನವೋದಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಂಟಿಸಲಾಯಿತು. ಸ್ವಲ್ಪ ತಯಾರಿಯೊಂದಿಗೆ ಪರೀಕ್ಷೆಯನ್ನು ಬರೆದರೂ ಮತ್ತೆ ಅದರ ಬಗ್ಗೆ ಯಾವ ವಿಚಾರವೂ ತಿಳಿಯಲಿಲ್ಲ. ನಂತರದ ವರ್ಷಗಳಲ್ಲಿ ಅನೇಕರು ಪರೀಕ್ಷೆ ಬರೆದರು. ಆದರೆ ಯಾರೂ ಆಯ್ಕೆಯಾಗಲಿಲ್ಲ. ಅದ್ಹೇಗೆ ಅಂತ ಇವತ್ತಿಗೂ ತಿಳಿದಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸರ್ಕಸ್ಸು ಮತ್ತು ತಪ್ಪಿದ ಎಂಟು ಲೆಕ್ಕಗಳು: ಕಾಸಿಂ ನದಾಫ್ ಬರಹ

ಆ ನಾಯಿಯ ಬೊಗಳುವಿಕೆಯ ಹಿನ್ನೆಲೆಯಲ್ಲಿಯೇ ನಮ್ಮ ಮನೆಯ ಇದುರಿಗಿದ್ದ, ಅಕ್ಕಪಕ್ಕದ ಎಂಟು ಮನೆಗಳ ದಾಟಿಕೊಂಡು ಮಲಗಿದ್ದ ಇಕ್ಕಟ್ಟಾದ ಬೀದಿಯ ಆ ಕಡೆ ತುದಿಯಲ್ಲಿ ಪ್ರತ್ಯಕ್ಷವಾದ ಎರಡು ಪ್ಯಾಂಟ್ ತೊಟ್ಟ ಆನೆಕಾಲುಗಳಂತವು ಮತ್ತು ಅವುಗಳ ಹಿಂದೆ ಬಾಡಿಗಾರ್ಡುಗಳಂತೆ ನಾಲ್ಕು ಚಡ್ಡಿ ತೊಟ್ಟುಕೊಂಡ ಎರಡೆರಡೆಂಬಂತೆ ಎಂಟು ಕುದುರೆ ಕಾಲುಗಳಂತವುಗಳು ಇತ್ತ ಬರುತ್ತಿದ್ದವು. ಆ ಕಾಲುಗಳ ವೇಗದಲ್ಲಿಯೇ ನೆಲಕ್ಕೆ ಕುಟ್ಟುತ್ತಾ ಬೆತ್ತವು ಒಂದು ಬರುತ್ತಿದ್ದುದನ್ನು ಕೆಳಗಿನಿಂದ ಮೇಲಕ್ಕೆ ಕಣ್ಣಾಡಿಸಿದಾಗ ನಾನು ಅಡಿಯಿಂದ ಮುಡಿಯವರೆಗೂ ನಡುಗುತ್ತಾ ಕ್ಷಣದಲ್ಲಿಯೇ ಬೆವೆತುಬಿಟ್ಟೆ.
ಕಾಸಿಂ ನದಾಫ್ ಭೈರಾಪುರ ಬರೆದ ಶಾಲಾ ದಿನಗಳ ಒಂದು ನೆನಪು ನಿಮ್ಮ ಓದಿಗೆ

Read More

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ