Advertisement

Tag: kendasampige

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

Read More

ಮನೆ ಮತ್ತು ಮನದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಇಲ್ಲಿ ಕನ್ನಡಕ್ಕೆ ಅನುವಾದಿಸಿರುವ ದಿತಿ ರೋನೆನ್‌ರ ಕವನಗಳಲ್ಲಿ ಅವರ ಎಲ್ಲಾ ಆಸ್ಥೆಗಳ, ನಂಬಿಕೆಗಳ, ಕಾಳಜಿಗಳ ಉದಾಹರಣೆಗಳನ್ನು ಕಾಣಬಹುದು. ಹಿಟ್ಲರ್‌ನ ಕಾಲದ ಜರ್ಮನಿ ಯಹೂದಿಗಳ ವಿರುದ್ಧ ನಡೆಸಿದ ಹತ್ಯಾಕಾಂಡದ ನೆನಪುಗಳು ಗಾಯಗಳು ಎಂದೂ ಮರೆಯಾಗಲ್ಲ. ಈ ಹತ್ಯಾಕಾಂಡದಿಂದ ಬದುಕುಳಿದವರ ಮಗಳಾಗಿ ದಿತಿ ರೋನೆನ್‌ ಅವರು ಇದರ ಬಗ್ಗೆ ಬಹು ಮಾರ್ಮಿಕವಾಗಿ ಬರೆಯುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ