Advertisement

Tag: kendasampige

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಅಳಿಸಲಾಗದ ನೋವುಗಳು: ಅಶೋಕ ಪವಾರರ ಆತ್ಮಕತೆಯ ಪುಟಗಳು

ಅಪ್ಪ, ಧೋಂಡಿ ಮಾಮಾ ಮತ್ತು ಲಮಾಣಿಗಳು ಪೋಲೀಸರ ಕಾಲಿಗೆ ಬಿದ್ದರು. ‘‘ಸರಕಾರ„„ ಧಣ್ಯಾರ, ನಾವು ಕಳ್ಳತನ ಮಾಡಿಲ್ಲರಿ. ಬೇಕಾದರ ಯಾವ ದ್ಯಾವರ ಮುಂದೂ ಕರ್ಕೊಂಡ ಹೋಗರಿ. ನಮ್ಗ ಏನೂ ಗೊತ್ತಿಲ್ಲರಿ.’’ ಸಾಯೇಬ ಸೊಂಟದ ಬೆಲ್ಟ ಬಿಚ್ಚಿದ. ಧೋಂಡು ಮಾಮಾನ ಮುಕಳಿಗೆ ಎರಡು ಜಡಿದ. ಲಮಾಣ್ಯಾರ ಮುಕುಳಿ ಮ್ಯಾಲೂ ಒದ್ದರು. ಅವರು ಜೋರ-ಜೋರಾಗಿ ಬೊಬ್ಬಿ ಹೊಡೀತ ಕಾಲಿಗೆ ಬಿದ್ದರು. ಮುಂದ ಅಪ್ಪನ ಬೆನ್ನಿಗೂ ಜೋರಾಗಿ ಗುದ್ದಿದರು. ಅಪ್ಪ ತಲಿಗೆ ಚಕ್ಕರ ಬಂದ ಬಿದ್ದ.
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಅಶೋಕ ಪವಾರರ ಆತ್ಮಕತೆ “ಬಿಡಾರ”

Read More

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ