Advertisement

Tag: kendasampige

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಚಂದವಳ್ಳಿ ತೋಟದ ನೆನಪುಗಳು: ಡಾ. ಸದಾಶಿವ ದೊಡಮನಿ ಬರಹ

ಭೀಮವ್ವ ಆಯಿ ಮಲ್ಲಪ್ಪ ಮುತ್ಯಾನ ಮಾತು, ಮೀರುವಂಗ ಇರಲಿಲ್ಲ. ನನ್ನ ಕೈಯೊಳಗಿನ ಗಂಗಾಳ ತೊಗೊಂಡು, ಬಾ ಅಂತ ಒಳಗ ಕರ್ದು, ವಣಗಿ ಹಾಕಿ ನನ್ನ ಕೈಯಾಗ ಗಂಗಾಳ ಕೊಡುವುದರೊಳಗ ಮಲ್ಲಪ್ಪ ಮುತ್ಯಾ ತಾನ ಎದ್ದು ಬಂದು, ನನ್ನ ಕೈಯೊಳಗಿನ ಗಂಗಾಳ ಇಸಗೊಂಡು, ಒಳಗೆ ಹೋಗಿ, ಇಡೀ ಗಡಗೀನ ಗಂಗಾಳಕ್ಕ ಸುರುವಿ, ‘ತೊಗೊಂಡು ಹೋಗ’ ಅಂತ ಕೊಟ್ಟು ಕಳಿಸಿ ಬಿಡುತ್ತಿದ್ದ.
ತಮ್ಮ ಬಾಲ್ಯಕಾಲದ ನೆನಪನ್ನು ಹಂಚಿಕೊಂಡಿದ್ದಾರೆ ಡಾ. ಸದಾಶಿವ ದೊಡಮನಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ