Advertisement

Tag: kendasampige

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ವರ್ಲ್ಡ್ ಟೆಸ್ಟ್ ಚಾಂಪಿಯನ್‌ಷಿಪ್: ಇ.ಆರ್. ರಾಮಚಂದ್ರನ್ ಅಂಕಣ

ಟೆಸ್ಟ್ ಕ್ರಿಕೆಟ್ ಚೆನ್ನಾಗಿ ಆಡದಿದ್ದರೆ, ಬಿಸಿಸಿಐಅನ್ನು ಬಹಳ ಭಾರತೀಯರೇ ದೂರುತ್ತಾರೆ. ಒಂದು ರೀತಿಯಲ್ಲಿ ಇದು ಸಹಜ. ಭಾರತ ಟೆಸ್ಟ್ ಮ್ಯಾಚ್‌ಗಳನ್ನು ಚೆನ್ನಾಗಿ ಆಡುತ್ತಿಲ್ಲ ಅದಕ್ಕೆ ಹಣದ ವಾಸನೆ ಬಂದಿದೆ, ಅಲ್ಲಿ ಆಡುವವರೆಲ್ಲಾ ಹಣದಾಸೆಯಿಂದ ಟೆಸ್ಟ್ ಚೆನ್ನಾಗಿ ಆಡುತ್ತಿಲ್ಲ ಎಂಬ ಮಾತೂ ಈಗೀಗ ಕೇಳಿಬರುತ್ತಿದೆ. ಈ ಮಧ್ಯೆ ಭಾರತ ಯಾವ ಕಪ್ /ಟ್ರೋಫಿ, ಅದರಲ್ಲೂ ಐಸಿಸಿ ಟ್ರೋಫಿಯನ್ನು ಕಳೆದ 10 ವರ್ಷದಿಂದ ಗೆದ್ದಿಲ್ಲ. ಅದಕ್ಕೆ ಎಷ್ಟೋ ಅಭಿಮಾನಿಗಳೂ ಐಪಿಎಲ್‌ನ ಜರಿಯುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ