Advertisement

Tag: kendasampige

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಮೊದ್ಲು ಕಾರ್‌ ಓಡ್ಸಿದ್ದು ಯಾರ್‌ ಗೊತ್ತಾ?!: ಗುರುದತ್ ಅಮೃತಾಪುರ ಸರಣಿ

ಕಾರ್ಲ್ ಬೆಂಜ್ ತನ್ನ ಪರಿಶ್ರಮದಿಂದ ನಿರ್ಮಿಸಿದ ಚಲಿಸುವ ವಾಹನದ ಬಗ್ಗೆ ಅವನಿಗೆ ಅನುಮಾನವಿತ್ತು. ಜೊತೆಗೆ ಸ್ಪಾರ್ಕ್ ಪ್ಲಗ್, ಬ್ಯಾಟರಿ ತಂತ್ರಜ್ಞಾನ ಇನ್ನೂ ಇರದ ಕಾರಣ, ನಿಂತಲ್ಲೇ ಕಾರನ್ನು ಪ್ರಾರಂಭಿಸಲು ಸಾಧ್ಯವಿರಲಿಲ್ಲ. ಈ ಕಾರಿಗೆ ಸ್ಟಿಯರಿಂಗ್ ಕೂಡ ಇಲ್ಲ. ದಿಕ್ಕು ಬದಲಾಯಿಸಲು ಸೈಕಲ್ ಗಾಲಿಗೆ ಕೊಡುವ ರೀತಿಯ ಒಂದು ಹತೋಟಿ ಮಾತ್ರ ಇದೆ.
“ದೂರದ ಹಸಿರು” ಸರಣಿಯಲ್ಲಿ ಜೆರ್ಮನಿಯ ಕಾರು ಸಂಗ್ರಹಾಲಯದ ಕುರಿತು ಗುರುದತ್ ಅಮೃತಾಪುರ ಬರಹ

Read More

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗುಡುಗು, ಮಿಂಚು ಸುರಿಸುವ ಮಾಂತ್ರಿಕರು: ಇ.ಆರ್. ರಾಮಚಂದ್ರನ್ ಅಂಕಣ

ಆ ಪಂದ್ಯದಲ್ಲಿ ವಿವಿಎಸ್ 167 ರನ್ ಹೊಡೆದರು… ಚಚ್ಚಿದರು ಅನ್ನುವ ಪದ ಇನ್ನೂ ಸರಿಹೋಗಬಹುದು. ಮಿಕ್ಕವರ ಸ್ಕೋರ್? ಗಂಗೂಲಿ 25, ಬೋಲರ್‌ಗಳಾದ ಕುಂಬ್ಳೆ, ಶ್ರಿನಾಥ್ ತಲಾ 15! ಮಿಕ್ಕವರೆಲ್ಲರೂ ಒಂದು ಅಂಕಕ್ಕೆ ಔಟಾದರು! ಎಕ್ಸ್ಟ್ರಾಸ್ 21! ವಿಶೇಷವೆಂದರೆ ಆಸ್ಟ್ರೇಲಿಯಾದ ಹೆಸರಾಂತ ಬೋಲರ್‌ಗಳಾದ ಶೇನ್ ವಾರ್ನ್‌ 13 ಓವರ್‌ಗಳಿಗೆ 60 ರನ್ ಮತ್ತು ಫಾಸ್ಟ್ ಬೋಲರ್ ಬ್ರೆಟ್ ಲೀ 11 ಓವರ್‌ಗೆ 67 ರನ್‌ ಕೊಟ್ಟಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ