Advertisement

Tag: kendasampige

ಕಳೆದುಹೋದವರನ್ನು ಹೇಗೆ ಹುಡುಕಲಿ?: ಅಮಿತಾ ರವಿಕಿರಣ್ ಬರಹ

ಇದನ್ನೆಲ್ಲಾ ನಾನೀಗ ಬರೆಯುವಾಗಲೂ ಇದೆಲ್ಲ ಕನಸೇ ಅನಿಸುತ್ತದೆ, ಕಂಡು ಕೇಳರಿಯದ ಊರಿನಿಂದ ಬಂದು, ನನ್ನೂರಿನಿಂದ ಹೋಗುವಾಗ ಅಣ್ಣಂದಿರಾಗಿ ಹೋಗಿದ್ದರು. ಹೋಳಿಗೆ ಬಣ್ಣ ಕಳಿಸುತ್ತಿದ್ದೆ, ದಶರೆಗೆ ಬನ್ನಿ, ರಕ್ಷಾಬಂಧನಕ್ಕೆ ರಾಖಿ, ಸಂಕ್ರಾಂತಿಗೆ ಎಳ್ಳು, ಪತ್ರಗಳಲ್ಲಿ ಒಣಗಿದ ಹೂವು ಎಲೆಗಳು. ಅದೊಂದು ಬೇರೆಯದೇ ಲೋಕವಾಗಿತ್ತು. ಮೂವರಲ್ಲಿ ಜಾಸ್ತಿ ಪತ್ರ ಬರೆಯುತ್ತಿದ್ದುದು ದೆಹಲಿಯ ಅಶೋಕ್ ಕುಮಾರ್ ಮತ್ತು ಅಕ್ಬರ್ ಖಾನ್ ಅವರು. ಜೀತೇಂದ್ರ ಪ್ರಸಾದ್ ಅವರ ಪತ್ರ ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಬರುತ್ತಿತ್ತು. ನಾನು, ತಂಗಿ ಪತ್ರ ಬರೆಯುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಹರಿಕತೆಯ ಸಮಯದಲ್ಲಿ…: ಎಚ್. ಗೋಪಾಲಕೃಷ್ಣ ಸರಣಿ

ಇವನ್ನೆಲ್ಲಾ ಮರೆತು ಹೋಗಿದ್ದಾಗ ಹರಿಕತೆ ದಾಸರ ನೆನಪು ನನಗೆ ಮತ್ತೆ ಧುತ್ತೆಂದು ಬಂದದ್ದು ರಾಜಧಾನಿಯಲ್ಲಿ ಚಂದ್ರಶೇಖರ ಕಂಬಾರರು ಅಭಿನಯಿಸಿದ ಒಂದು ನಾಟಕ ನೋಡಿದಾಗ. ಕಂಬಾರರು ನಾಟಕ ಮಾಡಿದಾಗ ಕೆಂಪು ಜುಬ್ಬ ಧರಿಸಿ ತಲೆಗೆ ರುಮಾಲು ಕಟ್ಟಿ ಸೊಂಟಕ್ಕೆ ಬಟ್ಟೆ ಬಿಗಿದು, ಕಾಲಿನ ಗೆಜ್ಜೆ ಕುಣಿಸಿ ಡಾನ್ಸ್ ಮಾಡುತ್ತಾ ನಾಟಕ ಮಾಡಿದಾಗ ಯಾವುದೋ ಬೇರೆ ಲೋಕಕ್ಕೆ ಹೋದ ಹಾಗೆ ಭಾಸವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

Read More

ಚಿಗರಿ ಬಸ್ಸಿನ ಗಂಧರ್ವ: ಲಿಂಗರಾಜ ಸೊಟ್ಟಪನವರ್‌ ಪ್ರಬಂಧ

ನಾನು ಸರ್‌ಗೆ ಐದುನೂರು ಕೊಟ್ಟೆ.. ಅವರು ಮಡಚಿ ಇಟ್ಟುಕೊಂಡರು. ಆಯ್ತು ಎಂದರು.. ನಾನು ನಿಂತೇ ಇದ್ದೆ. ಯಾಕೋ ಅಂದರು.. ನಾನು ಮತ್ತೆ ಐದು ನೋಟು ಕೊಟ್ಟೆ. ಅವರು ಹೈರಾಣ. ಪ್ರಯೋಗ ಮಾಡಿದ್ದು ಅರ್ಥವಾಯಿತು. ಅವರು ಏನೊಂದು ಹೇಳದೆ ಮೌನವಾದರು. ಹೋಗಿ ಕುತ್ಕೋ ಅಂದರು ಡೆಸ್ಕ್‌ನಲಿ ಕೂತೆ. ಸ್ವಲ್ಪ ಹೊತ್ತು ಹಾಗೇ ನೋಡಿದರು. ಹೀಗೆಲ್ಲ ಮಾಡಬಾರದು.. ಎಂದರು ಅಷ್ಟೇ. ನಾನು ಹಾಗೆಲ್ಲ ಮಾಡಿಯೂ ಐದು ನೋಟುಗಳನ್ನು ಅವರಿಗೆ ಕೊಟ್ಟಿದ್ದೆ. ಅವರು ತಪ್ಪನ್ನು ಮಾತ್ರ ತಿದ್ದುವ ಪ್ರಯತ್ನ ಮಾಡಿದ್ದರು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ