Advertisement

Tag: kendasampige

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗುಡುಗು, ಮಿಂಚು ಸುರಿಸುವ ಮಾಂತ್ರಿಕರು: ಇ.ಆರ್. ರಾಮಚಂದ್ರನ್ ಅಂಕಣ

ಆ ಪಂದ್ಯದಲ್ಲಿ ವಿವಿಎಸ್ 167 ರನ್ ಹೊಡೆದರು… ಚಚ್ಚಿದರು ಅನ್ನುವ ಪದ ಇನ್ನೂ ಸರಿಹೋಗಬಹುದು. ಮಿಕ್ಕವರ ಸ್ಕೋರ್? ಗಂಗೂಲಿ 25, ಬೋಲರ್‌ಗಳಾದ ಕುಂಬ್ಳೆ, ಶ್ರಿನಾಥ್ ತಲಾ 15! ಮಿಕ್ಕವರೆಲ್ಲರೂ ಒಂದು ಅಂಕಕ್ಕೆ ಔಟಾದರು! ಎಕ್ಸ್ಟ್ರಾಸ್ 21! ವಿಶೇಷವೆಂದರೆ ಆಸ್ಟ್ರೇಲಿಯಾದ ಹೆಸರಾಂತ ಬೋಲರ್‌ಗಳಾದ ಶೇನ್ ವಾರ್ನ್‌ 13 ಓವರ್‌ಗಳಿಗೆ 60 ರನ್ ಮತ್ತು ಫಾಸ್ಟ್ ಬೋಲರ್ ಬ್ರೆಟ್ ಲೀ 11 ಓವರ್‌ಗೆ 67 ರನ್‌ ಕೊಟ್ಟಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಕುರಿತ ಬರಹ ನಿಮ್ಮ ಓದಿಗೆ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಾವಿನ ತೋಪಿನ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಅವನು ಓಡುವುದರಲ್ಲಿ ಯಾವಾಗಲೂ ಪ್ರಥಮ.. ಹಾಗಾಗಿ ಅವನೇನೊ ತಪ್ಪಿಸಿಕೊಂಡ. ಮರವನ್ನು ಹತ್ತುವುದರಲ್ಲಿ ಅಂತಹ ಅನುಭವವೇನು ಇಲ್ಲದ ನಾನು ನಿಧಾನವಾಗಿ ಮರ ಇಳಿಯುವುದರಲ್ಲಿ ಸಿಕ್ತಿಮ್ಮಜ್ಜ ಹತ್ತಿರವಾಗಿದ್ದ. ಅವನು ಹತ್ತಿರ ಬರುವುದು ಕಂಡದ್ದೇ ಎದೆಬಡಿತ ಜೋರಾಗಿತ್ತು. ಕೈ ಕಾಲುಗಳು ನಡುಗಲು ಪ್ರಾರಂಭಿಸಿದ್ದವು. ನನಗೆ ಬೇರೆ ದಾರಿ ಇರಲಿಲ್ಲ. ನಾನು ಮರದಿಂದ ಇಳಿಯಲಿಲ್ಲ, ಬದಲು ಅದರ ಮಧ್ಯದಲ್ಲಿ ಅವಿತುಕೊಂಡೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಒರಗಿಕೊಳ್ಳುವ ಮುನ್ನ….

ರಜಾದಿನಗಳ ಮಧ್ಯಾಹ್ನಗಳಲ್ಲಿ ನಾನು ಆಕೆ ಮನೆಯ ಆ ನೀಲಿ ಬಾಗಿಲನ್ನ ಧಡ ಧಡ ಬಡಿಯುತ್ತ ನಿಂತು ಬಿಡುತ್ತಿದ್ದೆ, ಮೊದಮೊದಲು, ಬಾಗಿಲು ತೆಗೆದು ಆಮೇಲ್ ಬಾ ಮಾಮ ಮಕ್ಕೊಂಡಾರು ಅನ್ನುತ್ತಿದ್ದ ಅಕ್ಕ, ಆಮೇಲೆ ಒಳಗಿನಿಂದಲೇ ಕೂಗಲು ಶುರು ಮಾಡಿದಳು. ಆನಂತರ ಉತ್ತರಿಸುವ ಗೋಜಿಗೂ ಹೋಗಲಿಲ್ಲ. ಆಗೆಲ್ಲ ಸಿಕ್ಕಾಪಟ್ಟೆ ಅವಮಾನವಾಗಿ ಕಣ್ಣು ತುಂಬಿಕೊಂಡು ಮನೆಗೆ ಹೋಗುತ್ತಿದ್ದೆ. ನನ್ನ ಅಳುವಿಗೆ ಕಾರಣ ಕೇಳುವಷ್ಟು ವ್ಯವಧಾನ ಯಾರಿಗೂ ಇರಲಿಲ್ಲ. ನನ್ನ ದೋಸ್ತರಾಗಿದ್ದ ಮರಗಳು ಕೂಡ ನನ್ನ ಹತ್ತಿರ ಮಾತು ಬಿಟ್ಟಂತೆ ನನಗೆ ಭಾಸವಾಗುತ್ತಿತ್ತು, ಯಾಕೆಂದರೆ ಅಕ್ಕ ಸಿಕ್ಕಿದ್ದೇ ಸಿಕ್ಕಿದ್ದು… ಮೌನವಾಗಿ ಮಾತನಾಡುವ ಸ್ನೇಹಿತರಿಗಿಂತ ಮಾತನಾಡುವ ಜೀವಕ್ಕೆ ನಾನು ಆದ್ಯತೆ ಕೊಟ್ಟಿದ್ದು ಅವಕ್ಕೂ ಸಿಟ್ಟು ಬಂದಿತ್ತೇನೋ.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ