Advertisement

Tag: kendasampige

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?

ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ