Advertisement

Tag: kendasampige

ಗೃಹ ತಪಸ್ವಿನಿಯ ಮೌನದ ಮಾತು: “ಊರ್ಮಿಳಾ” ಕಾದಂಬರಿಯ ಕುರಿತು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರಹ

ನಿದ್ರೆಯನ್ನು ಯಾರಾದರು ಸ್ವಿಕರಿಸಿದರೆ ಮಾತ್ರ ನಾನು ಒಪ್ಪುವೆ ಎಂದಾಗ ಲಕ್ಷ್ಮಣ ನನ್ನ ನೆನಪಲ್ಲೆ ವಿರಹದಲ್ಲಿರುವೆ ಪತ್ನಿ ಊರ್ಮಿಳೆಗೆ ನನ್ನ ಪರವಾದ ನಿದ್ರೆ ಕರುಣಿಸು. ವನವಾಸದ ಅವಧಿ ಮುಗಿಯುವರೆಗೂ ಎಂದಾಗ ನಿದ್ರಾ ದೇವತೆ ಹಾಗೆ ಆಗಲಿ ತಥಾಸ್ತು ಎಂದು ಊರ್ಮಿಳೆ ಬಳಿ ಬಂದ ದೇವಿ ಊರ್ಮಿಳೆ ನಿನ್ನ ಪತಿ ನಿನಗೆ ಅವನ ಪರವಾದ ನಿದ್ರೆಯನ್ನು ಸ್ವಿಕರಿಸಲು ಹೇಳಿರುವನು.
ವಿಜಯಾ ವಿಷ್ಣುಭಟ್ ಬರೆದ “ಊರ್ಮಿಳಾ” ಕಾದಂಬರಿಯ ಕುರಿತು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಬರಹ

Read More

ಅದೇ ದಾರಿ… ಅದೇ ತಿರುವು…:  ವಿನಾಯಕ ಅರಳಸುರಳಿ ಅಂಕಣ

ರಾತ್ರಿಯಾದರೆ ಸಾಕು, ಒಂದೊಂದು ಮನೆಯೂ ಒಂದೊಂದು ಬೆಳಕಿನ ಡಬ್ಬಿ. ಒಂದೊಂದು ಕಿಟಕಿಯಲ್ಲಿ ಕತ್ತಲು, ಇನ್ನೊಂದರಲ್ಲಿ ಬೆಳಕು. ಆ ಬೆಳಕಿನ ಪರದೆಯ ಹಿಂದೆಯೇ ಕಪ್ಪು ನೆರಳಾಗಿ ಕದಲುವ ಮನುಷ್ಯರು. ವಾಹನಗಳ ಭರಾಟೆ ತಗ್ಗಿರುವ ರಾತ್ರಿ ಹತ್ತರ ನೀರವದಲ್ಲಿ ಸಮೀಪದಲ್ಲೇ ಕೇಳಿಸುವ ರೈಲಿನ ಕೇಕೆ. ಅರೆರೇ, ರೈಲಿನ ಹಳಿ ಇಷ್ಟು ಹತ್ತಿರದಲ್ಲೇ ಇದೆಯೇ? ಈ ಕ್ಷಣಕ್ಕೆ ಕೇಳಿಸಿದ ಕೇಕೆಯಲ್ಲೇ ಅದು ಹಾದು ಹೋಗಲಿರುವ ನದಿ-ಬೆಟ್ಟ-ಸುರಂಗ-ಕಾಡುಗಳ ಸುಂದರ ಪ್ರಯಾಣದ ಕಲ್ಪನೆಯಾಗಿ ಮನಸ್ಸಿನಲ್ಲೇನೋ ಖುಷಿಯ ಭಾವ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ

ಶತಮಾನಗಳ ಅವಧಿಯಲ್ಲಿ ಈ ಭಾಷಾಪಟ್ಟಿಯಲ್ಲಿರುವ ಕೆಲವಂತೂ ಒಂದಕ್ಕಿಂತ ಹೆಚ್ಚು ರಾಮನ ಕಥೆಗಳನ್ನು ಹೊಮ್ಮಿಸಿವೆ. ಸಂಸ್ಕೃತ ಒಂದರಲ್ಲೇ ಕಾವ್ಯ, ಪುರಾಣಗಳ ರೂಪದಲ್ಲಿ ಇಪ್ಪತ್ತೈದಕ್ಕಿಂತಲೂ ಹೆಚ್ಚು ರಾಮಕಥೆಗಳಿವೆ. ಶಾಸ್ತ್ರೀಯ ಮತ್ತು ಜಾನಪದೀಯ ನೆಲೆಗಳೆರಡರಲ್ಲೂ ನಾಟಕ, ನೃತ್ಯ-ನಾಟಕ ಮತ್ತು ಇತರ ರೂಪಗಳನ್ನು ಸೇರಿಸಿದರೆ ಅದರ ಸಂಖ್ಯೆ ಇನ್ನೂ ಹೆಚ್ಚು. ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಗಳಲ್ಲಿ ಇರುವ ಎಲ್ಲ ಶಿಲ್ಪ, ಉಬ್ಬುಶಿಲ್ಪ, ಮುಖವಾಡ, ನೆರಳಿನಾಟ, ಮತ್ತು ಚಕ್ಕಳಗೊಂಬೆ ಪ್ರದರ್ಶನಗಳನ್ನೂ ಸೇರಿಸಬೇಕು.
ಎ. ಕೆ. ರಾಮಾನುಜನ್ನರ ಸಂಶೋಧನಾ ಲೇಖನ ‘ಮುನ್ನೂರು ರಾಮಾಯಣಗಳು, ಐದು ಉದಾಹರಣೆಗಳು ಮತ್ತು ಅನು-ವಾದದ ಬಗೆಗಿನ ಮೂರು ಚಿಂತನೆಗಳು’ ಕುರಿತು ಸುಕನ್ಯಾ ಕನಾರಳ್ಳಿ ಬರಹ

Read More

ಸಮರ್ಥ ಕೆಲಸದ ಗುಟ್ಟು… ಎಂದಾದರೂ ಆದೀತೇ ರಟ್ಟು?: ಎಲ್.ಜಿ.ಮೀರಾ ಅಂಕಣ

ಆ ಇಬ್ಬರು ಹಿರಿಯ ಅಧ್ಯಾಪಕಿಯರ ಮುಖ ನೋಡಿದೆ. ಅವರಲ್ಲೊಬ್ಬರು `ಹೇ… ಸುಲಭ ಇದು. ನೋಡಿ, ಒಬ್ರು ಈ ಕಡೆ, ಇನ್ನೊಬ್ರು ಆ ಪಕ್ಕದ ಕುರ್ಚೀಲಿ ಕೂತ್ಕೊಳಿ. ನಾನು ಇಲ್ಲಿ ಕೂತ್ಕೋತೀನಿ. ನೂರರಿಂದ ಶುರುವಾಗೋ ಅರ್ಜಿ ಎಲ್ಲಾ ನೀವು ತಗೊಳ್ಳಿ, ಇನ್ನೂರರಿಂದ ಶುರುವಾಗೋದು ನೀವು, ಮುನ್ನೂರರಿಂದ ಶುರುವಾಗೋದು ನಾನು ತಗೋತೀನಿ.. ಬೇಗ ಬೇಗ ಇವುಗಳನ್ನ ನಾವು ಪ್ರತ್ಯೇಕ ಮಾಡ್ಬಹುದು’ ಅಂದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತಾರನೆಯ ಬರಹ

Read More

ಕೆಂಪು ಕಾರು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಹೊಸ ಕಾರ್ ಬುಕ್ ಮಾಡಿ ಈ ಕಾರನ್ನು ಎಕ್ಸ್ಚೇಂಜ್‌ನಲ್ಲಿ ಕೊಡುವ ಮಾತುಕತೆ ಆದ ನಂತರ ಮೊದಲಿನ ಲವಲವಿಕೆಯನ್ನು ಈ ಕಾರು ಕಳೆದುಕೊಂಡು ಬಿಟ್ಟಿತು ಅಂತ ಯಾಕೋ ನನ್ನ ಮನಸ್ಸಿಗೆ ತೀವ್ರವಾಗಿ ಅನ್ನಿಸಿತು. ಮರುದಿನ ಕಾರ್ ಸ್ಟಾರ್ಟ್ ಮಾಡುವಾಗ ಇಂಜಿನ್ ಶಬ್ಧ ಬೇರೆಯೇ ತರಹ ಕೇಳಿಸಿದ ಹಾಗಾಯ್ತು. ಏನೋ ಸಮಸ್ಯೆ ಆಗಿದೆ ತೋರಿಸಿಕೊಂಡು ಬನ್ನಿ ಅಂದ ಹೆಂಡತಿ ಮಾತಿಗೆ ಇಲ್ಲ ಅನ್ನಲಾಗದೆ ಸುರತ್ಕಲ್ ಪೇಟೆಗೆ ಒಂದು ಸುತ್ತು ಹಾಕಿ ಬಂದು ಏನಾಗಿಲ್ಲ ಅಂತೆ, ಅಂತ ಸುಳ್ಳು ಹೇಳಿದ್ದರ ಹಿಂದೆ ಕಾರ್ ಮೇಲೆ ನನಗಿದ್ದ ನಂಬಿಕೆಯೇ ಕಾರಣವಾಗಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಏಳನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ