Advertisement

Tag: kendasampige

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?

ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ