Advertisement

Tag: kendasampige

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ನಿನ್ನೆ ಇದ್ದದ್ದು ಇವತ್ತು ಮಂಗಮಾಯ!

ಒಮ್ಮಿಂದೊಮ್ಮೆಲೆ ಮೂಡುತ್ತಿದ್ದ ಆ ಕಳೆ ನಮ್ಮಲ್ಲಿ ಚಿಂತೆ ಉಂಟುಮಾಡಿದ್ದು ಹೌದು. ಅಂತಹ ಗಿಡಗಳು ಬೆಳೆಯುವಂತೆ ಯಾರಾದರೂ ಬೇಕಂತಲೇ ಒಂದಿಷ್ಟು ಬೀಜಗಳನ್ನು ನಮ್ಮ ಭತ್ತದ ಬೆಳೆಗಳ ನಡುವೆ ಎಸೆದಿರಬೇಕು ಎಂಬ ಸಂಶಯ ನಾಗಣ್ಣ ಅವರಿಗೆ ಮೂಡಿತು. ಇದ್ದರೂ ಇದ್ದೀತು ಅಂತ ನನಗೂ ಅನಿಸಿತು. ಆದರೆ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡೋಣ ಅಂತ ಸುಮ್ಮನಾದೆ. ಒಂದು ಮೂಟೆ ಭತ್ತ ಬಂದರೂ ಸಾಕು, ಒಂದಿಷ್ಟು ದಿನ ವಿಷರಹಿತ ಅನ್ನ ಉಣ್ಣಬಹುದು ಎಂಬ ಸಣ್ಣ ಆಸೆ ನಮಗಿತ್ತು ಅಷ್ಟೇ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ