Advertisement

Tag: kendasampige

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಮಹಿಳಾ ಕ್ರಿಕೆಟ್ ಲೋಕದ‌ ತಾರೆಯರು….

ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್‌ರ ಹರ್ಮನ್‌ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ