Advertisement

Tag: kendasampige

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ನಿನ್ನೆ ಇದ್ದದ್ದು ಇವತ್ತು ಮಂಗಮಾಯ!

ಒಮ್ಮಿಂದೊಮ್ಮೆಲೆ ಮೂಡುತ್ತಿದ್ದ ಆ ಕಳೆ ನಮ್ಮಲ್ಲಿ ಚಿಂತೆ ಉಂಟುಮಾಡಿದ್ದು ಹೌದು. ಅಂತಹ ಗಿಡಗಳು ಬೆಳೆಯುವಂತೆ ಯಾರಾದರೂ ಬೇಕಂತಲೇ ಒಂದಿಷ್ಟು ಬೀಜಗಳನ್ನು ನಮ್ಮ ಭತ್ತದ ಬೆಳೆಗಳ ನಡುವೆ ಎಸೆದಿರಬೇಕು ಎಂಬ ಸಂಶಯ ನಾಗಣ್ಣ ಅವರಿಗೆ ಮೂಡಿತು. ಇದ್ದರೂ ಇದ್ದೀತು ಅಂತ ನನಗೂ ಅನಿಸಿತು. ಆದರೆ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡೋಣ ಅಂತ ಸುಮ್ಮನಾದೆ. ಒಂದು ಮೂಟೆ ಭತ್ತ ಬಂದರೂ ಸಾಕು, ಒಂದಿಷ್ಟು ದಿನ ವಿಷರಹಿತ ಅನ್ನ ಉಣ್ಣಬಹುದು ಎಂಬ ಸಣ್ಣ ಆಸೆ ನಮಗಿತ್ತು ಅಷ್ಟೇ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ