Advertisement

Tag: kendasampige

ಒರಗಿಕೊಳ್ಳುವ ಮುನ್ನ….

ರಜಾದಿನಗಳ ಮಧ್ಯಾಹ್ನಗಳಲ್ಲಿ ನಾನು ಆಕೆ ಮನೆಯ ಆ ನೀಲಿ ಬಾಗಿಲನ್ನ ಧಡ ಧಡ ಬಡಿಯುತ್ತ ನಿಂತು ಬಿಡುತ್ತಿದ್ದೆ, ಮೊದಮೊದಲು, ಬಾಗಿಲು ತೆಗೆದು ಆಮೇಲ್ ಬಾ ಮಾಮ ಮಕ್ಕೊಂಡಾರು ಅನ್ನುತ್ತಿದ್ದ ಅಕ್ಕ, ಆಮೇಲೆ ಒಳಗಿನಿಂದಲೇ ಕೂಗಲು ಶುರು ಮಾಡಿದಳು. ಆನಂತರ ಉತ್ತರಿಸುವ ಗೋಜಿಗೂ ಹೋಗಲಿಲ್ಲ. ಆಗೆಲ್ಲ ಸಿಕ್ಕಾಪಟ್ಟೆ ಅವಮಾನವಾಗಿ ಕಣ್ಣು ತುಂಬಿಕೊಂಡು ಮನೆಗೆ ಹೋಗುತ್ತಿದ್ದೆ. ನನ್ನ ಅಳುವಿಗೆ ಕಾರಣ ಕೇಳುವಷ್ಟು ವ್ಯವಧಾನ ಯಾರಿಗೂ ಇರಲಿಲ್ಲ. ನನ್ನ ದೋಸ್ತರಾಗಿದ್ದ ಮರಗಳು ಕೂಡ ನನ್ನ ಹತ್ತಿರ ಮಾತು ಬಿಟ್ಟಂತೆ ನನಗೆ ಭಾಸವಾಗುತ್ತಿತ್ತು, ಯಾಕೆಂದರೆ ಅಕ್ಕ ಸಿಕ್ಕಿದ್ದೇ ಸಿಕ್ಕಿದ್ದು… ಮೌನವಾಗಿ ಮಾತನಾಡುವ ಸ್ನೇಹಿತರಿಗಿಂತ ಮಾತನಾಡುವ ಜೀವಕ್ಕೆ ನಾನು ಆದ್ಯತೆ ಕೊಟ್ಟಿದ್ದು ಅವಕ್ಕೂ ಸಿಟ್ಟು ಬಂದಿತ್ತೇನೋ.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?

ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ