Advertisement

Tag: kendasampige

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಬಾಂಬುದಾಳಿಗೀಡಾಗಿ ಬಾನುಲಿ ಬರಿದಾಗಿದೆ ಮೌನವಾಗಿದೆ…

ಭಾಷಣ ಸ್ಪರ್ಧೆಯ ದಿನ ಬಂದಿತು. ಹೈಸ್ಕೂಲು ಕಟ್ಟಡದ ಹಿಂದಿನ ಗೋಡೆಯ ಮೇಲೆ ಹೋಗಿ ಕುಳಿತೆ. ಗೋಡೆ ಜಿಗಿದು ಸಭಾಭವನಕ್ಕೆ ಹೋಗಬೇಕೆಂದರೆ ಧೈರ್ಯ ಸಾಲದು. ಹಾಫ್ ಪ್ಯಾಂಟ್ ಹರಿದಿತ್ತು. ಷರ್ಟ್ ಗಲೀಜಾಗಿತ್ತು. ಕ್ಷೌರಿಕರಿಗೆ ಕೊಡಲಿಕ್ಕೆ ಹಣವಿಲ್ಲದ್ದಕ್ಕಾಗಿ ಕೂದಲು ಬೆಳೆದಿತ್ತು. ಕೊಬ್ಬರಿ ಎಣ್ಣೆ ಇಲ್ಲದ್ದಕ್ಕಾಗಿ ಕೂದಲು ಒಣಗಿದ್ದರಿಂದ ಕಾಡು ಮನುಷ್ಯನ ಹಾಗೆ ಕಾಣುತ್ತಿದ್ದೆ. ಭಾಷಣ ಮಾಡುವ ಸ್ಫೂರ್ತಿಗೆ ಪೂರಕವಾಗಿರುವಂಥ ಯಾವುದೂ ಇರಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 63ನೇ ಕಂತು ನಿಮ್ಮ ಓದಿಗೆ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ