Advertisement

Tag: kendasampige

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ