Advertisement

Tag: kendasampige

ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಸಾವೇ ಹಾಗೆ ಅದು ಉಂಟು ಮಾಡು ಪರಿಣಾಮವೂ ತೀವ್ರತರವಾದದ್ದು. ಹತ್ತಿರದವರ ಸಾವು ನಮ್ಮ ಬದುಕನ್ನು ಪಲ್ಲಟಗೊಳಿಸುವ ರೀತಿ ಎಂಥವರನ್ನೇ ಆಗಲಿ ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ಅದು ಸಹಜವಾದ ಸಾವಾದರೆ ಅದನ್ನು ಸಹಜವಾಗಿಯೇ ಸ್ವೀಕರಿಸಲು ಪ್ರಯತ್ನಿಸಬಹುದು. ಆದರೆ ಅದು ಕೊಲೆಯೋ, ಆತ್ಮಹತ್ಯೆಯೋ ಆಗಿದ್ದರೆ, ನಿಜಕ್ಕೂ ಅದನ್ನು ಮನಸ್ಸು ಒಪ್ಪಲು, ನಂಬಲು ಸಿದ್ಧವಿರುವುದೇ ಇಲ್ಲ.
ಅಕಾಲಿಕ ಸಮಯದಲ್ಲಿ ಸಾವಿನ ಬಾಗಿಲು ತಟ್ಟಿದ ಹಲವು ಲೇಖಕಿಯರ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ