Advertisement

Tag: kendasampige

ಕ್ರಿಕೆಟ್‌ ಜಗತ್ತಿನ ಕೆಚ್ಚೆದೆಯ ಸರ್ದಾರರು

ಸ್ಟುವರ್ಟ್ ವಿರುದ್ಧ ಸಿಟ್ಟಿನಲ್ಲಿದ್ದ ಯುವ್‌ರಾಜ್‌ ಸ್ಟುವರ್ಟ್ ಬ್ರಾಡ್‌ನ ಬೋಲಿಂಗ್ ಎದುರಿಸಲು ಮುಂದಾದರು. ಅವರ ಸಿಟ್ಟು ಎಷ್ಟರಮಟ್ಟಿಗೆ ಇತ್ತು ಅಂದರೆ ಮುಂದೆ ಅವರು ಆಡಿದ ಪ್ರತಿ ಬಾಲನ್ನೂ ಸಿಕ್ಸರ್‌ಗೆ ಕಳಿಸಿದರು. ಒಂದೊಂದು ಸಿಕ್ಸರ್ ಹೊಡೆದಮೇಲೂ ಫ್ಲಿಂಟಾಫ್ ಕಡೆಗೆ ನೋಡಿ ಬ್ಯಾಟ್ ತಿರುಗಿಸುತ್ತಿದ್ದರು ಯುವ್‌ರಾಜ್‌! ಬ್ರಾಡ್ ಪಾಪ! ಅವರು ಬಹಳ ದೊಡ್ಡ ಬೆಲೆ ತೆರಬೇಕಾಯಿತು. 6 ಬಾಲುಗಳಲ್ಲಿ 36! ಇ ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಯುವ್‌ರಾಜ್‌ ಸಿಂಘ್‌ ಹಾಗೂ ಹರ್ಭಜನ್‌ ಸಿಂಘ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಸಂಬಂಧಗಳಿಗೂ ಒಂದು ಕೊನೆಯ ದಿನ ಇದ್ದರೆ….!

ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಮತ್ತಷ್ಟು ಆತ್ಮೀಯ, ಅಪ್ಯಾಯ ಬಂಧವಾಗಿ ಬದುಕು ಹಿತವೆನಿಸುವ ದಿನಗಳಲ್ಲಿ ಯಾರಿಗಾದರೂ ಅಂತಹದ್ದೊಂದು ಸಂಬಂಧ ಜಡವಾಗಬಹುದೆಂಬ ಸುಳಿವು ಸಿಕ್ಕಿರುವುದಿಲ್ಲ. ಈ ದಿನ, ಈ ಕ್ಷಣ, ಈ ಕಾಲ ಸದಾ ಹೀಗೆಯೇ ಇರುವುದೆಂಬ ನಂಬಿಕೆ, ಆಶಯದ ಬುನಾದಿಯ ಮೇಲೆ ಕಟ್ಟಿದ ಕನಸಿನ ಗೋಪುರ ಕುಸಿಯತೊಡಗಿದಾಗ ಶುರು ಸತ್ವಪರೀಕ್ಷೆ. ಜೊತೆಯಾಗಿ ಎದುರಿಸಿದ ಕಷ್ಟ ಸುಖ, ಕೂಡಿಟ್ಟ ನೆನಪುಗಳು, ಜೋಳಿಗೆ ತುಂಬಿದ ಅನುಭವಗಳು ಮಸುಕಾಗುವವರೆಗೂ ಮುಗಿಯದ ಉಮ್ಮಳಿಕೆ‌. ಇದು ಬರಿಯ ಪ್ರೇಮಿಗಳಿಗೆ ಸಂಬಂಧಿಸಿದ ವಿಷಯವಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ