Advertisement

Tag: kendasampige

“ಆ ಕಾಲದ ರಾಜಲಕ್ಷ್ಮಿ…” ಸರಣಿ ಆರಂಭ

ರಾಜಲಕ್ಷ್ಮಿ ಎನ್. ರಾವ್ ಅವರನ್ನು ಅವರ ಕತೆಗಳ ಮೂಲಕ ಪರಿಚಯ ಮಾಡಿಕೊಂಡು ಸುಮಾರು ಮೂವತ್ತು ವರುಷಗಳ ಮೇಲಾಯಿತು. ನನ್ನ ಅಧ್ಯಯನ ಮತ್ತು ವೆಂಕಟಲಕ್ಷ್ಮಿಯವರ ಸಂದರ್ಶನದ ಒಟ್ಟು‌ ಮೊತ್ತವಾಗಿ ನಾನು ಕಂಡುಕೊಂಡ ಕತೆಗಾರ್ತಿ ರಾಜಲಕ್ಷ್ಮಿಯವರು ಬೆರಗು ಹುಟ್ಟಿಸಿದರು. ಸುಮಾರು ಹತ್ತು ಹನ್ನೆರೆಡು ವರ್ಷಗಳ ಹಿಂದೆ ಸನ್ಯಾಸಿನಿಯಾದ ಅವರನ್ನು ನಾನು ಅವರ ಆಶ್ರಮದಲ್ಲಿ ಭೇಟಿಯಾದಾಗ ಆ ಬೆರಗು ಬೆಳಕಾಗಿ ನನ್ನ ಮುಂದೆ ನಿಂತಿತ್ತು. ಆ ಬೆಳಕು ಈಗ ವಿಸ್ಮಯವಾಗಿದೆ.
ಗಿರಿಜಾ ಶಾಸ್ತ್ರಿ ಬರೆಯುವ ಸರಣಿ “ಆ ಕಾಲದ ರಾಜಲಕ್ಷ್ಮಿ” ಪ್ರತಿ ಶುಕ್ರವಾರದಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಮಹಿಳಾ ಕ್ರಿಕೆಟ್ ಲೋಕದ‌ ತಾರೆಯರು….

ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್‌ರ ಹರ್ಮನ್‌ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ