Advertisement

Tag: kendasampige

ನಮ್ಮನ್ನು ದೇವರೇ ಕಾಪಾಡಬೇಕು!

ನಾವಿಲ್ಲದಾಗ ನಮ್ಮ ಬೆಳೆಯನ್ನು ಕಾಪಾಡುವುದು ಹೇಗೆ ಎಂಬ ಪ್ರಶ್ನೆಗೆ ನನಗೆ ಇನ್ನೂ ಉತ್ತರ ಸಿಕ್ಕಿರಲಿಲ್ಲ. ಅಲ್ಲಿಯೇ ಮನೆ ಮಾಡಿಕೊಂಡು ಇರುವುದು ನನಗೆ ಇನ್ನೂ ಸಾಧ್ಯವಿರಲಿಲ್ಲ. ಹೊಲದಲ್ಲಿ ಕ್ಯಾಮೆರಾ ಹಾಕೋಣ ಅಂತಲೂ ಯೋಚಿಸಿದೆ. ಆದರೆ ಹಾಗೆ ಮಾಡಲು ಅಲ್ಲೊಂದು ತೋಟದ ಮನೆಯಾದರೂ ಬೇಕಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 19ನೇ ಕಂತು

Read More

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

“ಅಮ್ಮನ ಹೊಟ್ಟೆಯಲ್ಲಿ
ಒಂಬತ್ತು ತಿಂಗಳು
ಬೆಚ್ಚಗೆ ಬೆಳೆದ
ಮಿದು ಮಿದು
ತನ್ನದೇ
ಹುಟ್ಟು ಬೆತ್ತಲೆ ದೇಹ
ಹೇಗಿದೆ ಈಗ…
ಬೆಳಕಿನಲ್ಲಿ ನೋಡಿಕೊಳ್ಳಲೂ;
ಅಸಡ್ಡೆಯಾಗಿ ರೂಪಾಂತರ ಹೊಂದಿರುವ
ಹಳೆಯ ಭಯ ಹಿಂಜರಿಕೆ ನಾಚಿಕೆ!”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

Read More

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ