Advertisement

Tag: kendasampige

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ