Advertisement

Tag: kendasampige

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ