Advertisement

Tag: kendasampige

10 ಫಾರ್ 74 ಮತ್ತು ‘ಮೈಸೂರ್ ಎಕ್ಸ್‌ಪ್ರೆಸ್‌’

ಆದರೆ ಆ ಮ್ಯಾಚಿನಲ್ಲಿ ವೆಸ್ಟ್ ಇಂಡೀಸ್‌ನ ಬೋಲರ್ ಮೆರ್ವಿನ್ ಡಿಲ್ಲನ್‌ರ ಒಂದು ಬೌನ್ಸರ್ ಎಷ್ಟು ರಭಸದಿಂದ ಬಂತೆಂದರೆ ಕುಂಬ್ಳೆಯ ದವಡೆಗೆ ತಾಕಿ, ದವಡೆ ಮುರಿದುಹೋಯಿತು. ಕುಂಬ್ಳೆ ಆಸ್ಪತ್ರೆಗೆ ಹೋಗಿ ಶಸ್ತ್ರಚಿಕಿತ್ಸೆಗೆ ತಯಾರಾಗಿ ಯಾವಾಗ ಅದು ನಡೆಯುತ್ತೋ ಎಂದು ಎಲ್ಲರೂ ಕಾಳಜಿಯಿಂದ ಇದ್ದಾಗ, ವೆಸ್ಟ್ ಇಂಡೀಸ್ ಆಡುವಾಗ ಕುಂಬ್ಳೆ ಬ್ಯಾಂಡೇಜ್ ಹಾಕಿಕೊಂಡು ಮೈದಾನಕ್ಕೆ ಇಳಿದರು!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಅನಿಲ್‌ ಕುಂಬ್ಳೆ ಹಾಗೂ ಜಾವಗಲ್‌ ಶ್ರೀನಾಥ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ