Advertisement

Tag: kendasampige

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ