Advertisement

Tag: kendasampige

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ