Advertisement

Tag: kendasampige

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ