Advertisement

Tag: kendasampige

ಸಿನಿಲೋಕದಲ್ಲಿ ವಿಹರಿಸುತ್ತಾ….

ಜಗತ್ತಿನಲ್ಲಿ ಮೂಡಿದ ಎಲ್ಲ ವಿಪ್ಲವಗಳಿಗೆ ಪ್ರತಿಸ್ಪಂದಿಸುತ್ತಾ ಬಂದ ಜಾಗತಿಕ ಸಿನಿಮಾ ಇಪ್ಪತ್ತೊಂದನೆಯ ಶತಮಾನದ ಬೆಳವಣಿಗೆಗೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದನ್ನು ಈ ನಲವತ್ತು ಸಿನಿಮಾಗಳು ದಾಖಲಿಸುತ್ತವೆ. ಹಾಗಾಗಿ ಈ ಲೇಖನಗಳು ಒಂದು ಸಾರ್ಥಕ ಪ್ರಯತ್ನ ಎಂದು ನನ್ನ ಅನಿಸಿಕೆ. ಹೀಗೆ ಹೇಳುತ್ತಲೇ ಕಳೆದೆರಡು ದಶಕಗಳಲ್ಲಿ ಜಾಗತಿಕ ಸಿನಿಮಾಗಳಲ್ಲಿ ಮೂಡಿಬಂದ ಹೊಸಾ ಶೈಲಿಯಾದ ʻಸ್ಲೋ ಸಿನಿಮಾ ಚಳುವಳಿʼಯ ಒಂದೆರಡು ಕೃತಿಗಳನ್ನು ಪರಿಚಯಿಸಿದ್ದರೆ ಸಾಂದರ್ಭಿಕವಾಗಿ ಇನ್ನಷ್ಟು ಉಪಯುಕ್ತತೆ ಬರುತ್ತಿತ್ತೇನೋ. ಹಾಲಿವುಡ್ ಉದ್ದಿಮೆಯ ಜನಪ್ರಿಯ ಸಿದ್ಧಸೂತ್ರಕ್ಕೆ ಪರ್ಯಾಯವಾಗಿ ಮೂಡಿಬಂದದ್ದೇ ʻಸ್ಲೋ ಸಿನಿಮಾ ಚಳುವಳಿʼ.
ಎ.ಎನ್. ಪ್ರಸನ್ನರವರ ಆಯ್ದ ಜಾಗತಿಕ ಸಿನಿಮಾಗಳ ಕುರಿತ ಲೇಖನಗಳ ಸಂಕಲನ “ಸಿನಿ ಲೋಕ 21”ಕ್ಕೆ ಗಿರೀಶ್‌ ಕಾಸರವಳ್ಳಿ ಬರೆದ ಮುನ್ನುಡಿ

Read More

ಸದ್ದು… ಇಲ್ಲಿ ಯುದ್ಧ ಕತೆ ಹೇಳುತ್ತಿದೆ…

ಮೇಲ್ನೋಟಕ್ಕೆ ಇದು ಪೌಲ್ ಮತ್ತು ಆತನ ಸ್ನೇಹಿತರ ಜೀವನದ ಕತೆ ಆದರೂ, ಅದರ ಜೊತೆಯಲ್ಲಿ ಯುದ್ಧವನ್ನು ಒಳಗಿನಿಂದ ಹೊರಗಿನಿಂದ ತೋರಿರುವ ರೀತಿ ಅನನ್ಯ. ಯುದ್ಧವೆಂದರೆ ಹಸಿವು. ನೆಲದ ಹಸಿವು. ಇದರ ಜೊತೆಯಲ್ಲಿ ದೇಹದ ಹಸಿವು ಹೆಣ್ಣಿನ ಹಸಿವು ಹೆಚ್ಚಾಗಿ ಯುದ್ಧದಲ್ಲೇ ಇದ್ದು ಬದುಕಿನ ಹಸಿವನ್ನು ಅದ್ಭುತವಾಗಿ ತೋರಿಸಿದ್ದಾರೆ, ಪ್ರತಿ ಸೈನಿಕನು ಕೊನೆ ಗಳಿಗೆಯಲ್ಲಿ ಬದುಕಲು ಒದ್ದಾಡುವ ಕ್ಷಣಗಳಿವೆ.
‘ಆಲ್ ಕ್ವೈಯೆಟ್ ಆನ್ ದ ವೆಸ್ಟರ್ನ್‌ ಫ್ರಂಟ್’ ಸಿನಿಮಾದ ಕುರಿತು ಜಯರಾಮಾಚಾರಿ ಬರಹ

Read More

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ದಾರಾಸುರಂನ ಐರಾವತೇಶ್ವರ ದೇಗುಲದ ಒಳಗೂ… ಹೊರಗೂ…

ನಮಗೆ ರಥ ಅಂದ ಕೂಡಲೇ ನೆನಪಾಗುವುದು ಹಂಪಿಯ ವಿಜಯ ವಿಠ್ಠಲ ದೇವಾಲಯದ ರಥ, ಆಮೇಲೆ ಕೋನಾರ್ಕಿನ ಸೂರ್ಯ ದೇವಾಲಯದ ಚಕ್ರಗಳು. ಆದರೆ ಅದೇ ರೀತಿ ಇರುವ ರಥದ ಕಲ್ಪನೆಯಲ್ಲಿ ಕಟ್ಟಿರುವ ಇನ್ನೂ ಹಲವು ದೇವಾಲಯಗಳಿವೆ. ತಾಡಿಪತ್ರಿಯ ರಥದ ಮಾದರಿಯಲ್ಲಿರುವ ಗರುಡಗಂಬ, ಕುಂಭಕೋಣಂನ ಸಾರಂಗಪಾಣಿ ದೇವಾಲಯ ಹಾಗೂ ದಾರಾಸುರಮ್‌ನ ದೇವಾಲಯ ತಕ್ಷಣಕ್ಕೆ ನೆನಪಿಗೆ ಬರುವ ನಾನು ಕಂಡ ರಥದ ದೇವಾಲಯಗಳು.
‘ದೇವಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ