Advertisement

Tag: kendasampige

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

10 ಫಾರ್ 74 ಮತ್ತು ‘ಮೈಸೂರ್ ಎಕ್ಸ್‌ಪ್ರೆಸ್‌’

ಆದರೆ ಆ ಮ್ಯಾಚಿನಲ್ಲಿ ವೆಸ್ಟ್ ಇಂಡೀಸ್‌ನ ಬೋಲರ್ ಮೆರ್ವಿನ್ ಡಿಲ್ಲನ್‌ರ ಒಂದು ಬೌನ್ಸರ್ ಎಷ್ಟು ರಭಸದಿಂದ ಬಂತೆಂದರೆ ಕುಂಬ್ಳೆಯ ದವಡೆಗೆ ತಾಕಿ, ದವಡೆ ಮುರಿದುಹೋಯಿತು. ಕುಂಬ್ಳೆ ಆಸ್ಪತ್ರೆಗೆ ಹೋಗಿ ಶಸ್ತ್ರಚಿಕಿತ್ಸೆಗೆ ತಯಾರಾಗಿ ಯಾವಾಗ ಅದು ನಡೆಯುತ್ತೋ ಎಂದು ಎಲ್ಲರೂ ಕಾಳಜಿಯಿಂದ ಇದ್ದಾಗ, ವೆಸ್ಟ್ ಇಂಡೀಸ್ ಆಡುವಾಗ ಕುಂಬ್ಳೆ ಬ್ಯಾಂಡೇಜ್ ಹಾಕಿಕೊಂಡು ಮೈದಾನಕ್ಕೆ ಇಳಿದರು!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಅನಿಲ್‌ ಕುಂಬ್ಳೆ ಹಾಗೂ ಜಾವಗಲ್‌ ಶ್ರೀನಾಥ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಹೆಣ್ಣು ಮಾಡುವುದೆಲ್ಲ ಕಾಯಕವೇ

ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ