Advertisement

Tag: kendasampige

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಕಳೆದುಕೊಂಡದ್ದಕ್ಕಿಂತ ಪಡೆದುಕೊಂಡದ್ದರ ತೂಕವೇ ಹೆಚ್ಚು…

ನನ್ನ ಉದ್ದ ಕೂದಲನ್ನು ಮೂರು ನಾಲ್ಕುದಿಕ್ಕಿನಲ್ಲಿ ಇಳಿಬಿಟ್ಟು ಒಂದೊಂದೇ ಭಾಗವನ್ನು ತಿಕ್ಕಿ ತಿಕ್ಕಿ ಚಂದ ಮಾಡಿ ಸ್ನಾನ ಮಾಡಿಸಿದ ಕೂದಲು ಒಣಗಿದ ಮೇಲೆ ಹಗುಹಗುರಾಗಿ ಇಮ್ಮಡಿಸುತ್ತಿತ್ತು, ಕೆಲವೊಮ್ಮೆ ಈ ಸ್ನಾನದ ನಂತರ ಊಟ ಮಾಡಿ ಪಪ್ಪನ ಕೈಮೇಲೆ ಕಥೆ ಕೇಳುತ್ತ ಮಲಗಿದರೆ ಏಳುತ್ತಿದ್ದುದು ಸಂಜೆ ಆರಕ್ಕೆ. ಅದೊಂದು ದಿನ ಮಧ್ಯಾಹ್ನ ಮಲಗಲು, ನಮಗೆ ಅವಕಾಶ ಇತ್ತಾದರೂ, ನಾವು ತಪ್ಪಿಸಿಕೊಳ್ಳುವ ಎಲ್ಲ ಉಪಾಯ ಮಾಡುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ