Advertisement

Tag: kendasampige

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

Read More

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ