Advertisement

Tag: kendasampige

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ದಾರಾಸುರಂನ ಐರಾವತೇಶ್ವರ ದೇಗುಲದ ಒಳಗೂ… ಹೊರಗೂ…

ನಮಗೆ ರಥ ಅಂದ ಕೂಡಲೇ ನೆನಪಾಗುವುದು ಹಂಪಿಯ ವಿಜಯ ವಿಠ್ಠಲ ದೇವಾಲಯದ ರಥ, ಆಮೇಲೆ ಕೋನಾರ್ಕಿನ ಸೂರ್ಯ ದೇವಾಲಯದ ಚಕ್ರಗಳು. ಆದರೆ ಅದೇ ರೀತಿ ಇರುವ ರಥದ ಕಲ್ಪನೆಯಲ್ಲಿ ಕಟ್ಟಿರುವ ಇನ್ನೂ ಹಲವು ದೇವಾಲಯಗಳಿವೆ. ತಾಡಿಪತ್ರಿಯ ರಥದ ಮಾದರಿಯಲ್ಲಿರುವ ಗರುಡಗಂಬ, ಕುಂಭಕೋಣಂನ ಸಾರಂಗಪಾಣಿ ದೇವಾಲಯ ಹಾಗೂ ದಾರಾಸುರಮ್‌ನ ದೇವಾಲಯ ತಕ್ಷಣಕ್ಕೆ ನೆನಪಿಗೆ ಬರುವ ನಾನು ಕಂಡ ರಥದ ದೇವಾಲಯಗಳು.
‘ದೇವಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ