Advertisement

Tag: kendasampige

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಮಧ್ಯರಾತ್ರಿ ಗೇಟ್‌ ಸದ್ದೇಕಾಯಿತು…?

ಒಂದು ಭಾನುವಾರ ಪರೀಕ್ಷೆಗಳಿಗೆ ರಜೆ ಇತ್ತು. ನಮ್ ಇಡೀ ಓಣಿಯಲ್ಲಿಯೇ ಗುಸು‌ ಗುಸು ಆರಂಭವಾಗಿತ್ತು. ರಾತ್ರಿ ಎರಡರ ಸುಮಾರಿಗೆ ಗೇಟಿನ ಸದ್ದಾಯಿತೆಂದೂ… ಯಾರೋ ಕಾಂಪೌಂಡಿನಲ್ಲಿ ಓಡಾಡುತ್ತಿದ್ದುದನ್ನು ನೋಡಿರುವುದಾಗಿ ಅವರು ಮನೆಯ ಸದಸ್ಯರೆಲ್ಲರೂ ಕಣ್ಣಾರೆ ನೋಡಿರುವುದಾಗಿ ಮನೆ ಮನೆಯಲ್ಲೂ ಈ ಸುದ್ದಿ ಹಬ್ಬಿ ಇಡೀ ವಠಾರವೇ ಹೆದರಲಾರಂಭಿಸಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ