Advertisement

Tag: kendasampige

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ