Advertisement

Tag: kendasampige

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಸಿನಿಲೋಕದಲ್ಲಿ ವಿಹರಿಸುತ್ತಾ….

ಜಗತ್ತಿನಲ್ಲಿ ಮೂಡಿದ ಎಲ್ಲ ವಿಪ್ಲವಗಳಿಗೆ ಪ್ರತಿಸ್ಪಂದಿಸುತ್ತಾ ಬಂದ ಜಾಗತಿಕ ಸಿನಿಮಾ ಇಪ್ಪತ್ತೊಂದನೆಯ ಶತಮಾನದ ಬೆಳವಣಿಗೆಗೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದನ್ನು ಈ ನಲವತ್ತು ಸಿನಿಮಾಗಳು ದಾಖಲಿಸುತ್ತವೆ. ಹಾಗಾಗಿ ಈ ಲೇಖನಗಳು ಒಂದು ಸಾರ್ಥಕ ಪ್ರಯತ್ನ ಎಂದು ನನ್ನ ಅನಿಸಿಕೆ. ಹೀಗೆ ಹೇಳುತ್ತಲೇ ಕಳೆದೆರಡು ದಶಕಗಳಲ್ಲಿ ಜಾಗತಿಕ ಸಿನಿಮಾಗಳಲ್ಲಿ ಮೂಡಿಬಂದ ಹೊಸಾ ಶೈಲಿಯಾದ ʻಸ್ಲೋ ಸಿನಿಮಾ ಚಳುವಳಿʼಯ ಒಂದೆರಡು ಕೃತಿಗಳನ್ನು ಪರಿಚಯಿಸಿದ್ದರೆ ಸಾಂದರ್ಭಿಕವಾಗಿ ಇನ್ನಷ್ಟು ಉಪಯುಕ್ತತೆ ಬರುತ್ತಿತ್ತೇನೋ. ಹಾಲಿವುಡ್ ಉದ್ದಿಮೆಯ ಜನಪ್ರಿಯ ಸಿದ್ಧಸೂತ್ರಕ್ಕೆ ಪರ್ಯಾಯವಾಗಿ ಮೂಡಿಬಂದದ್ದೇ ʻಸ್ಲೋ ಸಿನಿಮಾ ಚಳುವಳಿʼ.
ಎ.ಎನ್. ಪ್ರಸನ್ನರವರ ಆಯ್ದ ಜಾಗತಿಕ ಸಿನಿಮಾಗಳ ಕುರಿತ ಲೇಖನಗಳ ಸಂಕಲನ “ಸಿನಿ ಲೋಕ 21”ಕ್ಕೆ ಗಿರೀಶ್‌ ಕಾಸರವಳ್ಳಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ